ಚಿಕ್ಕಮಗಳೂರಿನಲ್ಲಿ ಮೈತ್ರಿ ಅಭ್ಯರ್ಥಿ ಪ್ರಮೋದ್ ಮತಯಾಚನೆ
ಉಡುಪಿ, ಎ.16: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥ್ತಿಪ್ರಮೋದ್ ಮಧ್ವರಾಜ್ ಇಂದು ಚಿಕ್ಕಮಗಳೂರಿನ ತರಿಕೆರೆ ವಿಧಾನಸಭಾ ಕ್ಷೇತ್ರದ ಭಟತಾವರೆಕೆರೆಯಲ್ಲಿ ಪಾದ ಯಾತ್ರೆಯ ಮೂಲಕ ಮತಯಾಚನೆ ಮಾಡಿದರು.
ಅಲ್ಲದೆ ಅವರು ಚಿಕ್ಕಮಗಳೂರಿನ ಎಂ.ಸಿ.ಹಳ್ಳಿಯಲ್ಲಿ ಮತ್ತು ಅಜ್ಜಂಪುರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಮತಯಾಚನೆ ಮಾಡಿ ದರು.
ದೇವರಿಗೆ ವಿಶೇಷ ಪೂಜೆ: ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಚುನಾವಣೆಯಲ್ಲಿ ಜಯಶೀಲರಾಗಬೇಕೆಂದು ಅವರ ಅಬಿಮಾನಿಗಳು ಬನ್ನಂಜೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾಧವ ಬನ್ನಂಜೆ, ದಿನೇಶ್ ಪುತ್ರನ್, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಅಲೆವೂರು ಹರೀಶ್ ಕಿಣಿ, ಸುದೇಶ್ ಶೇಟ್, ದಿವಾಕರ ಕುಂದರ್ ಮೊದಲಾದವರು ಉಪಸ್ಥಿತರಿದ್ದರು.
Next Story