ಲಾರಿ ಢಿಕ್ಕಿ: ರಿಕ್ಷಾ ಚಾಲಕ ಮೃತ್ಯು
ಉಡುಪಿ, ಎ.16: ಲಾರಿಯೊಂದು ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಮೃತಪಟ್ಟ ಘಟನೆ ಪೆರಂಪಳ್ಳಿಯ ಶ್ಯಾಮ ಸರ್ಕಲ್ ಬಳಿ ಎ.15ರಂದು ಮಧ್ಯಾಹ್ನ 12:45ಕ್ಕೆ ನಡೆದಿದೆ.
ಮೃತರನ್ನು ರಿಕ್ಷಾ ಚಾಲಕ ಸೆಂದಿಲ್ ಕುಮಾರ್ ಎಂದು ಗುರುತಿಸಲಾಗಿದೆ. ರಿಕ್ಷಾದಲ್ಲಿದ್ದ ಲಕ್ಷ್ಮಿ ಮತ್ತು ಕುಪ್ಪಸ್ವಾಮಿ ಎಂಬವರು ಗಂಭೀರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಂಬಾಗಿಲು ಕಡೆಯಿಂದ ಮಣಿಪಾಲ ಕಡೆಗೆ ಹೋಗುತ್ತಿದ್ದ ಲಾರಿಯು ಮಣಿಪಾಲದಿಂದ ಅಂಬಾಗಿಲು ಕಡೆಗೆ ಬರುತ್ತಿದ್ದ ರಿಕ್ಷಾಕ್ಕೆ ಢಿಕ್ಕಿ ಹೊಡೆಯಿತು. ಇದರ ಪರಿಣಾಮ ರಿಕ್ಷಾ ರಸ್ತೆಗೆ ಅಪ್ಪಳಿಸಿತ್ತೆನ್ನಲಾಗಿದೆ. ಗಂಭೀರ ಗಾಯಗೊಂಡ ಸೆಂದಿಲ್ ಕುಮಾರ್ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story