ಎಸ್ಪಿ ತಂಡದಿಂದ ಹಿರಿಯಡ್ಕ ಜೈಲಿಗೆ ದಾಳಿ
ಉಡುಪಿ, ಎ.16: ಗಾಂಜಾ ಹಾಗೂ ಮಾರಕಾಸ್ತ್ರಗಳಿರುವ ಮಾಹಿತಿಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕಿ ನಿಶಾ ಜೇಮ್ಸ್ ನೇತೃತ್ವದ ತಂಡ ಎ.15 ರಂದು ಸಂಜೆ ವೇಳೆ ಹಿರಿಯಡ್ಕದಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ದಾಳಿ ನಡೆಸಿರುವ ಬಗ್ಗೆ ವರದಿಯಾಗಿದೆ.
ಚುನಾವಣೆ ಹಿನ್ನೆಲೆಯಲ್ಲಿ ಜೈಲಿನಲ್ಲಿ ಗಾಂಜಾ ಹಾಗೂ ಮಾರಕಾಸ್ತ್ರಗಳಿರುವ ಮಾಹಿತಿಯಂತೆ ಈ ದಾಳಿ ನಡೆಸಲಾಗಿದ್ದು, ಜೈಲಿನ ಎಲ್ಲ ಸೆಲ್, ಅಡುಗೆ ಕೋಣೆ, ಶೌಚಾಲಯಗಳಲ್ಲಿ ತಂಡ ಹುಡುಕಾಟ ನಡೆಸಿದೆ. ಆದರೆ ಅಂತಹ ಯಾವುದೇ ವಸ್ತುಗಳು ಪತ್ತೆಯಾಗಿಲ್ಲ ಎಂದು ಎಸ್ಪಿ ನಿಶಾ ಜೇಮ್ಸ್ ತಿಳಿಸಿದ್ದಾರೆ.
ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಚಂದ್ರ, ಮಣಿ ಪಾಲ ಪೊಲೀಸ್ ನಿರೀಕ್ಷಕ ಸುನೀಲ್ ಕುಮಾರ್, ಮೂವರು ಪೊಲೀಸ್ ಉಪನಿರೀಕ್ಷಕರು ಹಾಗೂ 30 ಪೊಲೀಸ್ ಸಿಬ್ಬಂದಿಗಳು ದಾಳಿ ನಡೆಸಿದ ಈ ತಂಡದಲ್ಲಿದ್ದರು.
Next Story