ಕಲ್ಲಿದ್ದಲು ಸಾಗಾಟದ ಲಾರಿ ಪಲ್ಟಿ: ಚಾಲಕ ಮೃತ್ಯು
ಕಾಪು, ಎ.16: ಕಲ್ಲಿದ್ದಲು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಪಲ್ಟಿಯಾದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಕಟಪಾಡಿ ಸಮೀಪದ ಫಾರೆಸ್ಟ್ ಗೇಟ್ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಎ.15ರಂದು ರಾತ್ರಿ 11:30ರ ಸುಮಾರಿಗೆ ನಡೆದಿದೆ.
ಮೃತರನ್ನು ಲಾರಿ ಚಾಲಕ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ವಾಯಿದ್ ದಾವುಲ್ ಸಾಬ್ ಎಂದು ಗುರುತಿಸಲಾಗಿದೆ. ಲಾರಿ ಕ್ಲೀನರ್ ಮೋನಿ ಮುನಿರ್ ಗೋರಿ(18) ಎಂಬವರು ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದಾರೆ.
ಮಂಗಳೂರು ಬೈಕಂಪಾಡಿಯ ಕಿರ್ಲೋಸ್ಕರ್ ಕಂಪೆನಿಯಿಂದ ಕಲ್ಲಿದಲ್ಲು ತುಂಬಿಸಿಕೊಂಡು ಉಡುಪಿ ಮಾರ್ಗವಾಗಿ ಕೊಪ್ಪಳಕ್ಕೆ ಸಾಗುತ್ತಿದ್ದ ಲಾರಿಯು ಚಾಲಕನ ನಿಯಂತ್ರಣ ತಪ್ಪಿ ಮಣ್ಣುರಸ್ತೆಯಲ್ಲಿ ಮಗುಚಿ ಬಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಚಾಲಕ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story