ನಿಂದನೆ ಆರೋಪ: ಕ್ಷಮೆ ಯಾಚಿಸಿದ ಎಸ್ಡಿಪಿಐ ಮುಖಂಡ ಹನೀಫ್ ಖಾನ್ ಕೊಡಾಜೆ
ಮಂಗಳೂರು: ಚುನಾವಣಾ ಭಾಷಣದ ವೇಳೆ ಉಲಮಾಗಳನ್ನು ನಿಂದಿಸಿದ್ದಾರೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಎಸ್ಡಿಪಿಐ ಮುಖಂಡ ಹನೀಫ್ ಖಾನ್ ಕೊಡಾಜೆ ಅವರು ಈ ಬಗ್ಗೆ ಕ್ಷಮೆ ಯಾಚಿಸಿದ್ದಾರೆ.
ಉಲಮಾಗಳನ್ನು ಜೀವನದಲ್ಲಿ ಆದರ್ಶವನ್ನಾಗಿ ಮಾಡಿಕೊಂಡಿರುವ ತಾನು ಅವರ ಬಗ್ಗೆ ಅಪಾರ ಗೌರವ, ಅಭಿಮಾನವನ್ನು ಹೊಂದಿದ್ದೇನೆ. ಉಲಮಾಗಳಿಗೆ ಸಂಬಂಧಿಸಿದಂತೆ ತನ್ನ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ಆ ಬಗ್ಗೆ ವಿಷಾದ ವ್ಯಕ್ತಪಡಿಸುತ್ತೇನೆ, ಕ್ಷಮೆ ಕೋರುತ್ತೇನೆ ಎಂದು ಹನೀಫ್ ಕೊಡಾಜೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Next Story