ಉಡುಪಿ ಜಿಲ್ಲಾಧಿಕಾರಿಯಿಂದ ಮತದಾನಕ್ಕೆ ಆಮಂತ್ರಣ
ಉಡುಪಿ ಜಿಲ್ಲೆಯ ಆತ್ಮೀಯ ಮತದಾರ ಬಂಧುಗಳೇ, ನಮ್ಮದು ಜಗತ್ತಿನಲ್ಲಿ ಅತ್ಯಂತ ಬೃಹತ್ ಪ್ರಜಾಪ್ರುತ್ವ ರಾಷ್ಟ್ರ. ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಹಲವಾರು ಭಾಷೆ, ಜನಾಂಗ, ಸಂಸ್ಕೃತಿ, ಧರ್ಮ ಹೊಂದಿರುವ ನಾವೆಲ್ಲರೂ ಒಂದು ಎಂಬ ಭಾವನೆಯಿಂದ ಬದುಕುತ್ತಿದ್ದೇವೆ. ಆದ್ದರಿಂದ ವಿಶ್ವದಲ್ಲಿ ನಮ್ಮದು ಬೃಹತ್ ಪ್ರಜಾಸತ್ತಾತ್ಮಕ ಜಾತ್ಯಾತೀತ ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರವಾಗಿ ಹೊರಹೊಮ್ಮಿದೆ.
ಮತದಾರ ಬಂಧುಗಳೇ, ನಮ್ಮ ದೇಶಕ್ಕೆ ಸುಭದ್ರ ಸರಕಾರವನ್ನು ಆಯ್ಕೆ ಮಾಡಲು ಇದೇ ಎ.18ರ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ಲೋಕಸಭಾ ಚುನಾವಣೆಗೆ ಮತದಾನ ನಡೆಯಲಿದೆ. ತಾವು ಹಾಗೂ ತಮ್ಮ ಕುಟುಂಬದ ಅರ್ಹ ಮತದಾರರು ಮತಗಟ್ಟೆಗೆ ಬಂದು ಯೋಗ್ಯ ಅಭ್ಯರ್ಥಿಗೆ ಮತ ಚಲಾಯಿಸುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕಿದೆ.
ಈ ಚುನಾವಣೆಯಲ್ಲಿ ಎಲ್ಲರನ್ನೂ ಒಳಗೊಂಡ ಸುಲಭ ಸಾಧ್ಯವಾದ ನೈತಿಕ ಮತದಾನಕ್ಕೆ ಒತ್ತು ಕೊಡಬೇಕಾಗಿದೆ. ಆದ್ದರಿಂದ ನಮ್ಮ ಜಿಲ್ಲೆಯಲ್ಲಿ ವಿಶೇಷ ಚೇತನರಿಗೆ, ಮಹಿಳೆಯರಿಗೆ ಹಾಗೂ ಹಿರಿಯ ನಾಗರಿಕ ಬಂಧುಗಳಿಗೆ ಮತಗಟ್ಟೆಯಲ್ಲಿ ವಿಶೇಷ ಸೌಲ್ಯವನ್ನು ಕಲ್ಪಿಸಲಾಗಿದೆ. ವಿಶೇಷಚೇತನರಿಗೆ ಮನೆಯಿಂದ ಕರೆದುಕೊಂಡು ಬಂದು ಮತದಾನ ಮಾಡಿ ವಾಪಸ್ ತೆರಳಲು ವಾಹನ ವ್ಯವಸ್ಥೆ ಮತ್ತು ಸಹಾಯಕರನ್ನು ನೇಮಿಸಲಾಗಿದೆ.
ಆದ್ದರಿಂದ, ನಾಡಿನ ಪ್ರಗತಿಯನ್ನು ದೃಢಪಡಿಸುವ ನಿಟ್ಟಿನಲ್ಲಿ,ಯಾವುದೇ ಆಸೆ ಆಮಿಷಗಳಿಗೆ ಹಾಗೂ ಯಾವುದೇ ಪ್ರಭಾವಗಳಿಗೆ ತಾವು ಒಳಗಾಗದೇ, ಕರ್ತವ್ಯಗಳನ್ನು ನಿರ್ಹಿಸಿ ಎಂದು ಮನವಿ ಮಾಡುತ್ತೇನೆ. ‘ಮತದಾನ ನಿಮ್ಮ ಹಕ್ಕು ಹಾಗೂ ನಿಮ್ಮ ಜವಾಬ್ದಾರಿ, ತಪ್ಪದೇ ಮತ ಚಲಾಯಿಸಿ’
-ಹೆಪ್ಸಿಬಾ ರಾಣಿ ಕೊರ್ಲಪಾಟಿ, ಜಿಲ್ಲಾ ಚುಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಉಡುಪಿ