ದ.ಕ. ಜಿಲ್ಲೆಯ ಮತದಾರರಿಗೆ ಅಭಿನಂದನೆ: ಯು.ಟಿ. ಖಾದರ್
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯಲ್ಲಿ ಅತ್ಯಂತ ಶಾಂತಿಯುತ ಮತ್ತು ಸೌಹಾರ್ದದಿಂದ ಚುನಾವಣೆ ನಡೆಸಿದ್ದಕ್ಕೆ ಎಲ್ಲ ರಾಜಕೀಯ ಪಕ್ಷದ ಅಭ್ಯರ್ಥಿಗಳಿಗೆ, ಮುಖಂಡರು ಮತ್ತು ಕಾರ್ಯಕರ್ತರಿಗೆ, ಪಕ್ಷೇತರ ಅಭ್ಯರ್ಥಿಗಳು, ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸುವುದಾಗಿ ರಾಜ್ಯ ನಗರಾಭಿವೃದ್ಧಿ ಮತ್ತು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಅತ್ಯಧಿಕ ಮತದಾರರು ಮತ ಚಲಾಯಿಸಿದ್ದು, ಜಿಲ್ಲೆಯ ಎಲ್ಲ ಮತದಾರರಿಗೆ ಅಭಿನಂದನೆಗಳು. ಈ ಚುನಾವಣೆಯನ್ನು ಅತ್ಯಂತ ಸುಸಜ್ಜಿತವಾಗಿ ಸಕಲ ಸೌಲಭ್ಯದೊಂದಿಗೆ ನಿರ್ವಹಿಸಿದ ಜಿಲ್ಲಾಡಳಿತ ಮತ್ತು ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡ ಪ್ರತಿಯೊಬ್ಬ ಸರಕಾರಿ ನೌಕರರ, ಪೊಲೀಸ್-ರಕ್ಷಣಾ ಇಲಾಖೆ ಸಿಬ್ಬಂದಿ ಕಾರ್ಯ ಶ್ಲಾಘನೀಯ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story