ಬಿ.ಸಿ.ರೋಡ್: ಎ. 25ರಂದು ಸಾಮೂಹಿಕ ವಿವಾಹ, ಅಗಲಿದ ಸಮಸ್ತ ನೇತಾರರ ಅನುಸ್ಮರಣೆ
ಬಂಟ್ವಾಳ, ಎ. 23: ಎಸ್ಕೆಎಸ್ಸೆಸ್ಸೆಫ್ ಬಂಟ್ವಾಳ ಕೇಂದ್ರ ಘಟಕದ ಆಶ್ರಯದಲ್ಲಿ ಐದನೇ ವಾರ್ಷಿಕೋತ್ಸವದ ಪ್ರಯುಕ್ತ 6 ಜೋಡಿಗಳ ಸಾಮೂಹಿಕ ವಿವಾಹ ಹಾಗೂ ಅಗಲಿದ ಸಮಸ್ತ ನೇತಾರರ ಅನುಸ್ಮರಣೆ ಕಾರ್ಯಕ್ರಮವು ಎ. 25ರಂದು ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ನಡೆಯಲಿದೆ.
ರಶೀದ್ ಅಲಿ ಶಿಹಾಬ್ ತಂಙಳ್ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದು, ದ.ಕ. ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಖಾಝಿ ಅವರು ಅಧ್ಯಕ್ಷತೆ ವಹಿಸುವರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಝಮೀರ್ ಅಹ್ಮದ್, ಯು.ಟಿ.ಖಾದರ್, ಮಾಜಿ ಸಚಿವ ರಮಾನಾಥ ರೈ, ಶಾಸಕರಾದ ರಾಜೇಶ್ ನಾಯ್ಕ್ಉಳಿಪಾಡಿ, ಎನ್.ಎ.ಹ್ಯಾರಿಸ್, ಬಿ.ಎಂ. ಫಾರೂಕ್ ಸಹಿತ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story