ಬಾಂಬಿಲದಲ್ಲಿ ಶೈಕ್ಷಣಿಕ ಕಾರ್ಯಾಗಾರ
ಬಂಟ್ವಾಳ, ಎ.29: ತಾಲೂಕಿನ ಕಾವಳಪಡೂರು ಗ್ರಾಮದ ಮುಬಾರಕ್ ಜುಮಾ ಮಸೀದಿ ಬಾಂಬಿಲದ ಮದ್ರಸ ಸಭಾಂಗಣದಲ್ಲಿ, ಅನ್ಸಾರುಲ್ ಮುಸ್ಲಿಮೀನ್ ವೆಲ್ಫೇರ್ ಕಮಿಟಿಯ ಆಶ್ರಯದಲ್ಲಿ ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮಾಹಿತಿ ಕಾರ್ಯಾಗಾರ ಶಿಬಿರವು ಇತ್ತೀಚೆಗೆ ನಡೆಯಿತು.
ಕಾರ್ಯಕ್ರಮವನ್ನು ಮುಬಾರಕ್ ಜುಮಾ ಮಸೀದಿ ಬಾಂಬಿಲ ಇದರ ಖತೀಬ್ ಅಬ್ದುಲ್ ಬಶೀರ್ ಯಮಾನಿ ಉದ್ಘಾಟಿಸಿದರು. ಟ್ಯಾಲೆಂಟ್ ರಿಸರ್ಚ್ ಫೌಂಡೇಷನ್ ಸಂಚಾಲಕ ರಫೀಕ್ ಮಾಸ್ಟರ್ ಮಾತನಾಡಿ, ಶೈಕ್ಷಣಿಕ ಕೋರ್ಸ್ಗಳ ವಿವರ ಹಾಗೂ ವಿದ್ಯಾರ್ಥಿಗಳಿಗೆ ತಮ್ಮ ಶೈಕ್ಷಣಿಕ ಭವಿಷ್ಯದ ಆಯ್ಕೆ ಹೇಗಿರಬೇಕೆಂದು ಮಾಹಿತಿ ನೀಡಿದರು.
ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿಯ ಸುಮಾರು 50ರಷ್ಟು ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಅಬ್ದುಲ್ ಹಮೀದ್ ದೊಡ್ಡಮನೆ, ಸರಫುದ್ದೀನ್ ಗುಂಪಕಲ್ಲು, ಶಾಹಿಲ್ ಬಾಂಬಿಲ, ನಕಾಶ್ ಬಾಂಬಿಲ ಉಪಸ್ಥಿತರಿದ್ದರು.
Next Story