ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ‘ರಂಗ ಸ್ವರೂಪ ಪ್ರಶಸ್ತಿ’ ಪ್ರದಾನ
ಮಂಗಳೂರು, ಎ. 29: ರಂಗಸ್ವರೂಪ (ರಿ) ಕುಂಜತ್ತಬೈಲ್ ಮಂಗಳೂರು 2019ರ ಸೃಜನಾಂತರಂಗ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಮತ್ತು ಅಕ್ಷರ ಸಂತ ಹರೇಕಳ ಹಾಜಬ್ಬಗೆ ‘ರಂಗ ಸ್ವರೂಪ ಪ್ರಶಸ್ತಿ’ ಪ್ರದಾನ ಕಾರ್ಯಕ್ರಮವು ಮರಕಡದ ಕುಂಜತ್ತಬೈಲ್ ದ.ಕ.ಜಿಪಂ ಮಾದರಿ ಹಿ.ಪ್ರಾ.ಶಾಲೆಯಲ್ಲಿ ಇತ್ತೀಚೆಗೆ ನಡೆಯಿತು.
ಕಲಾವಿದ ಮತ್ತು ಪರಿಸರವಾದಿ ದಿನೇಶ್ ಹೊಳ್ಳ ಅತಿಥಿಯಾಗಿ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಅಕ್ಷರ ಸಂತ ಹರೇಕಳ ಹಾಜಬ್ಬಗೆ ‘ರಂಗ-ಸ್ವರೂಪ ಪ್ರಶಸ್ತಿ 2019’ಪ್ರದಾನ ಮಾಡಲಾಯಿತು.
ಮಂಗಳೂರು ಆಕಾಶವಾಣಿಯ ವಿಶ್ರಾಂತ ನಿರ್ದೇಶಕ ಡಾ. ವಸಂತ್ ಕುಮಾರ್ ಪೆರ್ಲ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಮಾಜಿ ಉಪ ಮೇಯರ್ ಕೆ. ಮುಹಮ್ಮದ್, ಸ್ವರೂಪ ಅಧ್ಯಯನ ಸಮೂಹದ ನಿರ್ದೇಶಕ ಗೋಪಾಡ್ಕರ್, ಶಾಲಾ ಮುಖ್ಯ ಶಿಕ್ಷಕಿ ಮಾಲತಿ, ಸ್ಕೇಟಿಂಗ್ ಬಾಲ ಕ್ರೀಡಾಪಟು ಫರಾಝ್ ಅಲಿ, ಸುಬ್ರಹ್ಮಣ್ಯ ಕಾಸರಗೋಡು ಉಪಸ್ಥಿತರಿದ್ದರು.
ಶಿಬಿರ ಸಂಯೋಜಕ ರೆಹಮಾನ್ ಖಾನ್ ಕುಂಜತ್ತಬೈಲ್ ಪ್ರಾಸ್ತಾವಿಕ ಮಾತುಗಳಾನ್ನಾಡಿದರು. ರಂಗ ಸ್ವರೂಪದ ಸದಸ್ಯೆ ಅನೀಸಾ ಸ್ವಾಗತಿಸಿದರು. ತಸ್ಲೀಮಾ ಬಾನು ಪ್ರಶಸ್ತಿ ಪತ್ರ ವಾಚಿಸಿದರು. ಪ್ರೇಮನಾಥ್ ಮರ್ಣೆ ಕಾರ್ಯಕ್ರಮ ನಿರೂಪಿಸಿದರು.