ಕಾರು ಢಿಕ್ಕಿ: ಬೈಕ್ ಸಹಸವಾರ ಮೃತ್ಯು
ಕೊಲ್ಲೂರು, ಎ.29: ಕಾರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸಹಸವಾರ ಮೃತಪಟ್ಟ ಘಟನೆ ವಂಡ್ಸೆ ಬೆಳ್ಳಾಲ ರಸ್ತೆಯ ಮಾವಿನಕಟ್ಟೆ ಎಂಬಲ್ಲಿ ನಡೆದಿದೆ.
ಮೃತರನ್ನು ಬೈಕ್ ಹಿಂಬದಿ ಸವಾರ ಸಂಜೀವ ಎಂದು ಗುರುತಿಸಲಾಗಿದೆ. ಬೈಕ್ ಸವಾರ ವಾಮನ ಸಣ್ಣಪುಟ್ಟ ಗಾಯಗೊಂಡು ಚಿಕಿತ್ಸೆ ಪಡೆದುಕೊಂಡಿದ್ದಾರೆ. ಎ.28ರಂದು ಸಂಜೆ 4ಗಂಟೆ ಸುಮಾರಿಗೆ ಬೆಳ್ಳಾಲ ಕಡೆಯಿಂದ ವಂಡ್ಸೆ ಕಡೆಗೆ ಹೋಗುತ್ತಿದ್ದ ಸಂದೇಶ ಎಂಬವರ ಕಾರು, ವಂಡ್ಸೆ ಕಡೆಯಿಂದ ಬೆಳ್ಳಾಲ ಕಡೆಗೆ ಬರುತ್ತಿದ್ದ ಬೈಕ್ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ಹಿಂಬದಿ ಸವಾರ ಸಂಜೀವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡರು.
ಕೂಡಲೇ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಎ.28ರ ಮಧ್ಯರಾತ್ರಿ ನಂತರ 12.20ರ ಸುಮಾರಿಗೆ ಸಂಜೀವ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story