ರಾಜಭವನದ ಸುತ್ತ ಬಿಗಿ ಬಂದೋಬಸ್ತ್: ವಿಮಾನ ನಿಲ್ದಾಣಕ್ಕೆ ತೆರಳುವವರು ಪರ್ಯಾಯ ರಸ್ತೆ ಬಳಸಲು ಸೂಚನೆ
ಬೆಂಗಳೂರು, ಜು.26: ಇಂದು (ಜು.26) ಸಂಜೆ 6 ಗಂಟೆಗೆ ರಾಜಭವದ ಗಾಜಿನ ಮನೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಸಮಾರಂಭದ ಹಿನ್ನೆಲೆಯಲ್ಲಿ ವಿಧಾನಸೌಧ ಹಾಗೂ ರಾಜಭವನದ ಸುತ್ತಮುತ್ತಲಿನ ರಸ್ತೆಗಳಲ್ಲಿ ವಿಪರೀತ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆಯಿರುವುದರಿಂದ ಸಾರ್ವಜನಿಕರು ಹಾಗೂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗುವ ಪ್ರಯಾಣಿಕರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಬೆಂಗಳೂರು ನಗರ ಸಂಚಾರ ಪೊಲೀಸ್ ಪ್ರಕಟನೆ ಸೂಚಿಸಿದೆ.
ರಾಜಭವನ ಮತ್ತು ಸುತ್ತ-ಮುತ್ತಲು ಪ್ರದೇಶದಲ್ಲಿ ಸುಗಮ ಸಂಚಾರಕ್ಕೆ ಅಡಚಣೆಯಾಗದಂತೆ ಪ್ರಮಾಣ ವಚನ ಸಮಾರಂಭಕ್ಕೆ ಆಗಮಿಸುವ ಗಣ್ಯರ ಸಂಚಾರಕ್ಕೆ ಅನುವು ಮಾಡಿಕೊಡುವ ಸಲುವಾಗಿ ಸಂಚಾರ ಬಂದೋಬಸ್ತ್ ಏರ್ಪಡಿಸಲಾಗಿದೆ. ಅನಿವಾರ್ಯ ಸಂದರ್ಭಗಳಲ್ಲಿ ಈ ದಿನ ಸಂಜೆ 4 ಗಂಟೆಯ ಒಳಗಾಗಿ ಈ ರಸ್ತೆಗಳನ್ನು ದಾಟಿ ಮುಂದೆ ಸಾಗುವಂತೆ ಸೂಚಿಸಲಾಗಿದೆ.
Next Story