ಕೀಟನಾಶಕ ಸೇವಿಸಿ ವ್ಯಕ್ತಿ ಆತ್ಮಹತ್ಯೆ
ಶಿವಮೊಗ್ಗ, ಜು. 28: ಕೀಟನಾಶಕ ಸೇವಿಸಿ ವ್ಯಕ್ತಿಯೋರ್ವರು ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಹೊಸನಗರ ತಾಲೂಕು ಬೆಳ್ಳೂರು ಸಮೀಪದ ವಡಿಗೇರಿ ಗ್ರಾಮದಲ್ಲಿ ನಡೆದಿದೆ.
ಗೋಪಾಲಸಿಂಗ್ (47) ಮೃತಪಟ್ಟವರೆಂದು ಗುರುತಿಸಲಾಗಿದೆ. ಶುಂಠಿ ಬೆಳೆಗೆ ಸಿಂಪಡಿಸಲು ತಂದಿಟ್ಟಿದ್ದ ಕೀಟನಾಶಕವನ್ನು ಇವರು ಕುಡಿದಿದ್ದರು. ತಕ್ಷಣವೇ ಕುಟುಂಬದವರು ಇವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ. ಈ ಸಂಬಂಧ ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story