ಮುಖ್ಯಮಂತ್ರಿ ಯಡಿಯೂರಪ್ಪ ದಕ್ಷಿಣ ಕನ್ನಡ ಜಿಲ್ಲೆಗೆ
ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಳ್ಳಲಿರುವ ಸಿಎಂ
ಮಂಗಳೂರು, ಆ. ೧೨: ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಳ್ಳಲಿರುವ ಮುಖ್ಯಮಂತ್ರಿ ಯಡಿಯೂರಪ್ಪ ಮಳೆಯಿಂದ ಹಾನಿಗೊಳಗಾಗಿರುವ ವಿವಿಧ ಪ್ರದೇಶಗಳಿಗೆ ಭೇಟಿ ನೀಡಲಿರುವರು.
ಬಜ್ಪೆಯ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ವಿಶೇಷ ವಿಮಾನದಲ್ಲಿ ಆಗಮಿಸಿ ರಸ್ತೆ ಮಾರ್ಗವಾಗಿ ಬೆಳ್ತಂಗಡಿ ತಾಲ್ಲೂಕಿಗೆ ತೆರಳುವರು.
ಮಳೆಯಿಂದ ಹಾನಿಗೀಡಾಗಿರುವ ಹಲವು ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮಧ್ಯಾಹ್ನ 2.30ರಿಂದ ಧರ್ಮಸ್ಥಳದಲ್ಲಿ ಸಭೆ ನಡೆಸಲಿರುವರು. ಮಳೆ ಹಾನಿಗೆ ಸಂಬಂಧಿಸಿದಂತೆ ಚುನಾಯಿತ ಪ್ರತಿನಿಧಿಗಳು ಮತ್ತು ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಬಳಿಕ ಬಂಟ್ವಾಳ ತಾಲ್ಲೂಕಿಗೆ ತೆರಳಿ ನೆರೆಯಿಂದ ಹಾನಿಗೀಡಾದ ಪ್ರದೇಶಗಳನ್ನು ವೀಕ್ಷಿಸಲಿರುವರು.
ಸಂಜೆ ಬಂಟ್ವಾಳದಿಂದ ಮಂಗಳೂರು ಏರ್ ಪೋರ್ಟ್ ಗೆ ಆಗಮಿಸಿ ವಿಶೇಷ ವಿಮಾನದಲ್ಲಿ ಸಂಜೆ 5.30ಕ್ಕೆ ಮೈಸೂರಿಗೆ ತೆರಳುವರು.
Next Story