ಮುಲ್ಕಿ: ಅ. 25ರಂದು ಚಂದ್ರಶೇಖರ ಸ್ವಾಮೀಜಿ ಜನ್ಮದಿನಾಚರಣೆ
ಮಂಗಳೂರು: ಅಂತರ್ ರಾಷ್ಟ್ರೀಯ ವಾಸ್ತುತಜ್ಞ ಚಂದ್ರಶೇಖರ ಸ್ವಾಮೀಜಿ ಅವರ ಜನ್ಮದಿನಾಚರಣೆ ಹುಟ್ಟೂರಾದ ಮುಲ್ಕಿಯಲ್ಲಿ ಅ.25ರಂದು ನಡೆಯಲಿದೆ.
ಸ್ವಾಮೀಜಿಯ ಜನ್ಮ ದಿನಾಚರಣೆಯ ಪ್ರಯುಕ್ತ ಮುಲ್ಕಿಯಲ್ಲಿ ಶುಕ್ರವಾರ ಬೆಳಗ್ಗೆ ಸರಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು-ಹಂಪಲು ವಿತರಿಸಲಾಗುವುದು, ಬಳಿಕ ಕಿನ್ನಿಗೋಳಿಯ ಸೈಂಟ್ ಮೇರಿಸ್ ನ ಭಿನ್ನ ಸಾಮರ್ಥ್ಯದ ಸ್ಪೆಷಲ್ ಸ್ಕೂಲ್ ಹಾಗೂ ಮುಲ್ಕಿಯ ಸಿಎಸ್ಐ ಬಾಲಿಕಾಶ್ರಮದ ಮಕ್ಕಳಿಗೆ ಸಿಹಿ ತಿಂಡಿ ವಿತರಿಸಲಾಗುವುದು.
ಈ ಸಂದರ್ಭ ಕಿನ್ನಿಗೋಳಿ ಯುಗಪುರುಷದ ಶ್ರೀ ಭುವನಾಭಿರಾಮ ಉಡುಪ, ಕಿಲ್ಪಾಡಿ ಪಂಚಾಯತ್ ಅಧ್ಯಕ್ಷ ಶ್ರೀಕಾಂತ್ ಕೆರೇಕಾಡು, ಪಡುಪಣಂಬೂರು ಪಂಚಾಯತ್ ಮಾಜಿ ಅಧ್ಯಕ್ಷ ವಿನೋದ್ ಸಾಲ್ಯಾನ್ ಬೆಳ್ಳಾರು, ಮೂಡುಬಿದಿರೆ ಆಳ್ವಾಸ್ ಹೋಮಿಯೋಪತಿಕ್ ಮೆಡಿಕಲ್ ಕಾಲೇಜಿನ ಉಪಪ್ರಾಂಶುಪಾಲ ಡಾ. ರೋಷನ್ ಪಿಂಟೊ, ಕಿನ್ನಿಗೋಳಿ ಚರ್ಚಿನ ಫಾ. ಮ್ಯಾಥ್ಯೂ ವಾಜ್, ಮುಲ್ಕಿ ಲಯನ್ಸ್ ಕ್ಲಬ್ ಅಧ್ಯಕ್ಷ ವೆಂಕಟೇಶ ಹೆಬ್ಬಾರ್, ಮುಲ್ಕಿ ಸರಕಾರಿ ಆಸ್ಪತ್ರೆಯ ವೈದ್ಯರಾದ ಡಾ. ಕೃಷ್ಣ, ಉಷಾ ವಿಶ್ವನಾಥ ಭಟ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಶೈಲಾ ಸಿಕ್ವೇರ, ದಕ್ಷಿಣ ಕನ್ನಡ ಜಿಲ್ಲಾ ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆಯ ಅಧ್ಯಕ್ಷ ಸುಭಾಷ್ ಕಾಪಿಕಾಡ್, ಜಯ ಕರ್ನಾಟಕ ಮುಲ್ಕಿ ವಲಯ ಸಂಘಟನೆ ಅಧ್ಯಕ್ಷ ಭಾಸ್ಕರ ಶೆಟ್ಟಿಗಾರ್ ಕೆರೆಕಾಡು, ಉದ್ಯಮಿ ಕಿಶೋರ್ ಶೆಟ್ಟಿ ಬಪ್ಪನಾಡು, ಪತ್ರಕರ್ತ ಶರತ್ ಶೆಟ್ಟಿ ಕಿನ್ನಿಗೋಳಿ, ಸಾಮಾಜಿಕ ಕಾರ್ಯಕರ್ತರಾದ ಲಯನ್ ಲಕ್ಷ್ಮಣ ಸಾಲ್ಯಾನ್ ಪುನರೂರು, ಅಬ್ದುಲ್ ರಝಾಕ್ ಮುಲ್ಕಿ, ಪ್ರಾಣೇಶ್ ಹೆಜಮಾಡಿ, ಚಂದ್ರಶೇಖರ ಸ್ವಾಮೀಜಿ, ಆಶ್ರಮದ ಸಂಚಾಲಕ ಪುನೀತ್ ಕೃಷ್ಣ, ಪತ್ರಕರ್ತ ನರೇಂದ್ರ ಕೆರೆಕಾಡು ಮತ್ತಿತರರು ಭಾಗವಹಿಸಲಿದ್ದಾರೆ .
ಈ ಬಾರಿ ಕರ್ನಾಟಕದಲ್ಲಿ ಉಂಟಾದ ಪ್ರಕೃತಿ ವಿಕೋಪದ ಹಿನ್ನೆಲೆಯಲ್ಲಿ ಸ್ವಾಮೀಜಿಯ ಹುಟ್ಟು ಹಬ್ಬವನ್ನು ಅತ್ಯಂತ ಸರಳ ರೀತಿಯಲ್ಲಿ ಆಚರಿಸಲಾಗುವುದು ಎಂದು ಮುಲ್ಕಿಯ ಕಿಲ್ಪಾಡಿ ಚಂದ್ರಶೇಖರ ಸ್ವಾಮೀಜಿ, ಆಶ್ರಮದ ಗೌರವಾಧ್ಯಕ್ಷ ವಿಶ್ವನಾಥ ಭಟ್ ತಿಳಿಸಿದ್ದಾರೆ.