ಭಾರೀ ಮಳೆ: ಅ. 26ರಂದು ಉ.ಕ. ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ
ಭಟ್ಕಳ: ಭಾರೀ ಮಳೆಯಿಂದಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಅ.26ರಂದು ಉತ್ತರ ಕನ್ನಡ ಜಿಲ್ಲೆಯ ಐದು ತಾಲೂಕುಗಳ ಎಲ್ಲಾ ಶಾಲೆ, ಕಾಲೇಜುಗಳು ಹಾಗೂ ಜಿಲ್ಲೆಯ ಎಲ್ಲ ಅಂಗನವಾಡಿಗಳಿಗೆ ರಜೆ ಘೋಷಿಸುವಂತೆ ಜಿಲ್ಲಾಧಿಕಾರಿ ಡಾ. ಹರೀಶ್ ಕುಮಾರ್ ಕೆ. ಸಂಬಂಧಿಸಿದ ಇಲಾಖೆ ಮುಖ್ಯಸ್ಥರಿಗೆ ಸೂಚಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸುವಂತೆ ಹಾಗೂ ಶನಿವಾರದ ತರಗತಿಯನ್ನು ಬೇರೊಂದು ದಿನ ಸರಿದೂಗಿಸುವಂತೆ ಬಿಇಒಗಳಿಗೆ ಸೂಚಿಸಿ, ಡಿಡಿಪಿಐ ಎನ್.ಜಿ.ನಾಯಕ್ ಆದೇಶಿಸಿದ್ದಾರೆ.
Next Story