ಹೆಬ್ರಿ: ಜೋಮ್ಲು ತೀರ್ಥ ಜಲಪಾತಕ್ಕೆ ತೆರಳಿದ್ದ ಯುವಕ ನೀರುಪಾಲು
ಉಡುಪಿ: ಹೆಬ್ರಿ ಸಮೀಪದ ಸಂತೆಕಟ್ಟೆಯ ಜೋಮ್ಲು ತೀರ್ಥ ಜಲಪಾತಕ್ಕೆ ತೆರಳಿದ್ದ ಯುವಕನೋರ್ವ ನೀರುಪಾಲಾಗಿರುವ ಘಟನೆ ರವಿವಾರ ಸಂಜೆ ವೇಳೆ ನಡೆದಿದೆ.
ನಾಪತ್ತೆಯಾದ ಯುವಕನನ್ನು ಬ್ರಹ್ಮಾವರ ಸಮೀಪದ ಕಡೂರು ಗಣಪೆ ನಿವಾಸಿ ಶೇಖರ್ ಶೆಟ್ಟಿ ಎಂಬವರ ಪುತ್ರ ಸಚಿನ್ ಕುಮಾರ್ ಶೆಟ್ಟಿ (24) ಎಂದು ಗುರುತಿಸಲಾಗಿದೆ.
ಸಚಿನ್ ಸೇರಿದಂತೆ ಏಳು ಮಂದಿ ಜೋಮ್ಲು ತೀರ್ಥಕ್ಕೆ ತೆರಳಿದ್ದಾರೆ ಎನ್ನಲಾಗಿದ್ದು, ಈ ವೇಳೆ ಸಚಿನ್ ಕಾಲುಜಾರಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದು ನಂತರ ಈತ ಸುಮಾರು ದೂರ ಈಜಿಕೊಂಡು ಹೋಗಿರುವುದು ಇತರರು ನೋಡಿದ್ದಾರೆ ಎಂದು ತಿಳಿದುಬಂದಿದೆ.
ನಂತರ ನಾಪತ್ತೆಯಾದ ಸಚಿನ್ ಗಾಗಿ ಸ್ಥಳೀಯರು ಹಾಗೂ ಹೆಬ್ರಿ ಪೊಲೀಸರು ರಾತ್ರಿವರೆಗೆ ಹುಡುಕಾಟ ನಡೆಸಿದ್ದಾರೆ ಆದರೆ ಈವರೆಗೆ ಸಚಿನ್ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
Next Story