ಜೆಡಿಎಸ್ಗೆ ಸಿದ್ಧಾಂತವೇ ಇಲ್ಲ: ದಿನೇಶ್ ಗುಂಡೂರಾವ್
ಉಡುಪಿ, ನ.6: ಜೆಡಿಎಸ್ ಪಕ್ಷಕ್ಕೆ ಒಂದು ಸ್ಪಷ್ಟವಾದ ನಿಲುವು, ಸಿದ್ಧಾಂತವೇ ಇಲ್ಲ. ಜೆಡಿಎಸ್ ಒಮ್ಮೆ ಯಾರೊಂದಿಗೂ ಸ್ನೇಹ ಬೆಳೆಸುತ್ತಾರೆ, ಇನ್ನೊಮ್ಮೆ ಯಾರೊಂದಿಗೂ ಧ್ವೇಷ ಸಾಧಿಸುತ್ತಾರೆ. ಸಹಾಯ ಮಾಡಿದವರ ಜೊತೆ ಹೋಗುವ ಪಾರ್ಟಿ ಅದು. ಜೆಡಿಎಸ್ಗೆ ಜಾತ್ಯತೀತ ನಿಲುವು ಎಂಬುದಿಲ್ಲ ಎಂದು ರಾಜ್ಯ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಉಡುಪಿ ನಗರದ ಅಜ್ಜರಕಾಡಿನ ಪುರಭವನದಲ್ಲಿ ಬುಧವಾರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ದಲ್ಲಿ ಪಾಲ್ಗೊಳ್ಳಲು ಆಗಮಿಸಿದ ದಿನೇಶ್ ಗುಂಡೂರಾವ್ ಸುದ್ದಿಗಾರರೊಂದಿಗೆ ಮಾತನಾಡಿದರು.
ಬಿಜೆಪಿ, ಜೆಡಿಎಸ್ ಉಪಚುನಾವಣೆ ಒಳ ಒಪ್ಪಂದ ವಿಚಾರದಲ್ಲಿ ದೇವೇಗೌಡ ಮತ್ತು ಯಡಿಯೂರಪ್ಪ ಇವರಲ್ಲಿ ಯಾರು ಸತ್ಯ ಮಾತನಾಡುತ್ತಾರೆ ಯಾರು ಸುಳ್ಳು ಹೇಳುತ್ತಾರೆ ಗೊತ್ತಾಗುವುದಿಲ್ಲ. ಈ ಗೊಂದಲ ಸೃಷ್ಟಿ ಮಾಡಿದ್ದು ಜೆಡಿಎಸ್ ಪಕ್ಷದವರು. ಕುಮಾರಸ್ವಾಮಿ ಹೇಳಿಕೆ ಗಳು ಅವಮಾನಕ್ಕೆ ಕಾರಣವಾಗಿವೆ. ಮುಂದೆ ಏನು ಮಾಡುತ್ತಾರೊ ಅದು ಅವರಿಗೆ ಬಿಟ್ಟದ್ದು. ನಾವು ಮಾತ್ರ ಬಿಜೆಪಿ ವಿರುದ್ಧ ನಿರಂತ ಹೋರಾಟ ಮಾಡುತ್ತೇವೆ ಎಂದರು.
ಬಿಜೆಪಿ, ಜೆಡಿಎಸ್ ಉಪಚುನಾವಣೆ ಒಳ ಒಪ್ಪಂದ ವಿಚಾರದಲ್ಲಿ ದೇವೇಗೌಡ ಮತ್ತು ಯಡಿಯೂರಪ್ಪ ಇವರಲ್ಲಿ ಯಾರು ಸತ್ಯ ಮಾತನಾಡುತ್ತಾರೆ ಯಾರು ಸುಳ್ಳು ಹೇಳುತ್ತಾರೆ ಗೊತ್ತಾಗುವುದಿಲ್ಲ. ಈ ಗೊಂದಲ ಸೃಷ್ಟಿ ಮಾಡಿದ್ದು ಜೆಡಿಎಸ್ ಪಕ್ಷದವರು. ಕುಮಾರಸ್ವಾಮಿ ಹೇಳಿಕೆ ಗಳು ಅವಮಾನಕ್ಕೆ ಕಾರಣವಾಗಿವೆ. ಮುಂದೆ ಏನು ಮಾಡುತ್ತಾರೊ ಅದು ಅವರಿಗೆ ಬಿಟ್ಟದ್ದು. ನಾವು ಮಾತ್ರ ಬಿಜೆಪಿ ವಿರುದ್ಧ ನಿರಂತರ ಹೋರಾಟ ಮಾಡುತ್ತೇವೆ ಎಂದರು. ಸುಪ್ರೀಂ ಕೋರ್ಟ್ ತಲುಪಿರುವ ಯಡಿಯೂರಪ್ಪಆಡಿಯೋ ಪ್ರಕರಣ ಕೋರ್ಟ್ನ ಗಮನಕ್ಕೆ ಬಂದಿದೆ ಎಂಬುದು ಮುಖ್ಯ. ಇದರಲ್ಲಿ ಸಮ್ಮಿಶ್ರ ಸರಕಾರದ ಪತನದಲ್ಲಿ ಯಡಿಯೂರಪ್ಪ ಮತ್ತು ಅಮಿತ್ ಶಾ ಅವರ ಪಾತ್ರ ಜಗಜ್ಜಾಹಿರಾಗಿದೆ. ಶಾಸಕರಿಗೆ ಅಮಿಷ, ಆಶ್ವಾಸನೆಗಳನ್ನು ಒಡ್ಡಿರುವುದು ಇದರಲ್ಲಿ ಸಾಬೀತಾಗಿದೆ. ಸಂವಿಧಾನ ಬಾಹಿರ ಕೆಲಸದಲ್ಲಿ ಅಮಿತ್ ಶಾ ಶಾಮೀಲಾ ಗಿದ್ದಾರೆ. ಇವರ ನೇತೃತ್ವದಲ್ಲಿ ಎಲ್ಲಾ ನಡೆದಿದೆ ಎಂಬುದು ಸ್ಪಷ್ಟವಾಗಿದೆ ಎಂದರು.
ಈ ಪ್ರಕರಣದ ಬಗ್ಗೆ ಹೋರಾಟ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ. ಬೆಂಗಳೂರಿಗೆ ತೆರಳಿದ ಬಳಿಕ ಪಕ್ಷದ ನಾಯಕರೊಂದಿಗೆ ಚರ್ಚಿಸಿ ಹೋರಾಟದ ಸ್ವರೂಪವನ್ನು ನಿರ್ಧರಿಸಲಾಗುವುು ಎಂದು ಗುಂಡೂರಾವ್ ನುಡಿದರು.
ಸಚಿವ ಈಶ್ವರಪ್ಪರಿಗೆ ಸ್ವಾಭಿಮಾನ ಇಲ್ಲ. ಸ್ವಾಭಿಮಾನಿ ಆಗಿದ್ದರೆ ಮಂತ್ರಿ ಆಗಬಾರದಿತ್ತು. ಉಪಮುಖ್ಯಮಂತ್ರಿ ಯಾಗಿದ್ದವರು ಈಗ ಮಂತ್ರಿ ಯಾಗಿದ್ದಾರೆ. ತನ್ನ ಜೂನಿಯರ್ಗಳು ಡಿಸಿಎಂ ಆಗಿರುವಾಗ ಇವರು ಮಂತ್ರಿಯಾಗಿದ್ದಾರೆ. ಈಶ್ವರಪ್ಪನಿಗೆ ಯಾವುದೇ ಬದ್ಧತೆ ಇಲ್ಲ. ಅಹಿಂದ ಪರ ಒಂದೇ ಒಂದು ಹೋರಾಟ ಮಾಡಿದ ಇತಿಹಾಸವಿಲ್ಲ. ಸುದ್ದಿಯಾಗೋದೇ ಈಶ್ವರಪ್ಪನ ಅಪೇಕ್ಷೆ. ಈಶ್ವರಪ್ಪನಿಗೆ ಗಂಭೀರತೆಯಿಲ್ಲ, ಗಹನವಾಗಿ ಮಾತನಾಲ್ಲ ಎಂದವರು ಹೇಳಿದರು.
ಸಚಿವ ಈಶ್ವರಪ್ಪರಿಗೆ ಸ್ವಾಭಿಮಾನ ಇಲ್ಲ. ಸ್ವಾಭಿಮಾನಿ ಆಗಿದ್ದರೆ ಮಂತ್ರಿ ಆಗಬಾರದಿತ್ತು. ಉಪಮುಖ್ಯಮಂತ್ರಿ ಯಾಗಿದ್ದವರು ಈಗ ಮಂತ್ರಿಯಾಗಿದ್ದಾರೆ. ತನ್ನ ಜೂನಿಯರ್ಗಳು ಡಿಸಿಎಂ ಆಗಿರುವಾಗ ಇವರು ಮಂತ್ರಿಯಾಗಿದ್ದಾರೆ. ಈಶ್ವರಪ್ಪನಿಗೆ ಯಾವುದೇ ಬದ್ಧತೆ ಇಲ್ಲ. ಅಹಿಂದ ಪರ ಒಂದೇ ಒಂದು ಹೋರಾಟ ಮಾಡಿದ ಇತಿಹಾಸವಿಲ್ಲ. ಸುದ್ದಿಯಾಗೋದೇ ಈಶ್ವರಪ್ಪನ ಅಪೇಕ್ಷೆ. ಈಶ್ವರಪ್ಪನಿಗೆ ಗಂಭೀರತೆಯಿಲ್ಲ, ಗಹನವಾಗಿ ಮಾತನಾಡಲ್ಲ ಎಂದವರು ಹೇಳಿದರು. ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ಗೆ ಮರು ಸೇರ್ಪಡೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಗುಂಡೂರಾವ್, ಇಂದಿನ ಕಾರ್ಯಕ್ರಮದಲ್ಲಿ ಅವರು ಉಳಿದ ನಾಯಕರೊಂದಿಗೆ ವೇದಿಕೆಯಲ್ಲಿದ್ದರು. ಹೀಗಾಗಿ ಪಕ್ಷಕ್ಕೆ ಸೇರ್ಪಡೆಗೊಂಡಂತೆ. ಈ ಬಗ್ಗೆ ನಿನ್ನೆ ರಾತ್ರಿ ಪಕ್ಷದೊಳಗೆ ಚರ್ಚೆಯಾಗಿದೆ. ಸೊರಕೆ, ಸಭಾಪತಿ, ಪ್ರಮೋದ್ ಎಲ್ಲರೂ ಒಟ್ಟಾಗಿ ಸೇರಿ ಪಕ್ಷದ ಪರವಾಗಿ ಕೆಲಸ ಮಾಡಲು ಒಪ್ಪಿಕೊಂಡಿದ್ದಾರೆ ಎಂದು ಅವರು ತಿಳಿಸಿದರು.