ಯಡಿಯೂರಪ್ಪ ಕ್ಷಮೆ ಯಾಚಿಸಬೇಕು: ಸಿಪಿಎಂ
ಮಂಗಳೂರು,ಡಿ.22: ಕೇಂದ್ರ ಸರಕಾರದ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟನೆಯನ್ನು ಹತ್ತಿಕ್ಕಲು ಮುಖ್ಯಮಂತ್ರಿ ಯಡ್ಡಿಯೂರಪ್ಪ ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಹಾಗಾಗಿ ಅವರು ರಾಜ್ಯದ ಜನತೆಯ ಕ್ಷಮೆ ಯಾಚಿಸಬೇಕು ಎಂದು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ವಸಂತ ಆಚಾರಿ ಆಗ್ರಹಿಸಿದ್ದಾರೆ.
ಸರಕಾರದ ನಿರ್ದೇಶನದ ಮೇರೆಗೆ ರಾಜ್ಯದಲ್ಲಿ ಅದರಲ್ಲೂ ಮಂಗಳೂರಿನಲ್ಲಿ ಹಿಂಸಾಚಾರ ನಡೆದಿದೆ. ಜನರ ಹತ್ತಿಕ್ಕಲು ಸೆ.144 ಮತ್ತು ಕರ್ಫ್ಯೂ ಹೇರಿದ್ದು ಖಂಡನೀಯ. ಮಂಗಳೂರಿನಲ್ಲಿ ಪೊಲೀಸ್ ಆಯುಕ್ತರು ವೃಥಾ ಇಬ್ಬರ ಕೊಲೆಗೆ ಕಾರಣರಾಗಿದ್ದಾರೆ. ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
Next Story