ಡಿ.23ರಂದು ರೈತರ ದಿನಾಚರಣೆ; ಕೃಷಿ ಪ್ರಶಸ್ತಿ ಪ್ರದಾನ
ಉಡುಪಿ, ಡಿ.22: ಉಡುಪಿ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ಆತ್ಮ ಅನುಷ್ಟಾನ ಸಮಿತಿ, ತಾಲೂಕು ಕೃಷಿಕ ಸಮಾಜ ಉಡುಪಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಡುಪಿ ತಾಲೂಕು ಇವರ ಸಂಯುಕ್ತ ಆಶ್ರಯದಲ್ಲಿ ರೈತರ ದಿನಾಚರಣೆ ಅಂಗವಾಗಿ ಸಾಧಕ ರೈತರಿಗೆ ಕೃಷಿ ಪ್ರಶಸ್ತಿ ಪ್ರದಾನ ಸಮಾರಂಭ ಡಿ.23ರಂದು ಬೆಳಗ್ಗೆ 10:30ಕ್ಕೆ ಉಡುಪಿ ಅಂಬಲಪಾಡಿ ಬೈಪಾಸ್ನ ಪ್ರಗತಿ ಸೌಧದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಉಡುಪಿ ಶಾಸಕ ಕೆ.ರಘುಪತಿ ಟ್ ಉದ್ಘಾಟಿಸಲಿದ್ದು, ಜಿಪಂ ಅಧ್ಯಕ್ಷ ದಿನಕರ ಬಾಬು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story