ಬೆಂಗಳೂರು: ಮರಕ್ಕೆ ಢಿಕ್ಕಿ ಹೊಡೆದು ಕಾರಿಗೆ ಬೆಂಕಿ
ಬೆಂಗಳೂರು, ಸೆ.3: ವೇಗವಾಗಿ ಹೋಗುತ್ತಿದ್ದ ಕಾರು ಮರಕ್ಕೆ ಢಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡು ಚಾಲಕ ಅದೃಷ್ಟವಶಾತ್ ಪಾರಾಗಿರುವ ಘಟನೆ ದೇವನಹಳ್ಳಿಯ ರಾಣಿ ಸರ್ಕಲ್ ಬಳಿ ಬುಧವಾರ ರಾತ್ರಿ ನಡೆದಿದೆ.
ರಾಣಿಸರ್ಕಲ್ ಬಳಿ ತಡರಾತ್ರಿ ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದಿದೆ. ಇದರ ರಭಸಕ್ಕೆ ಇಂಜಿನ್ನಲ್ಲಿ ಹೊತ್ತಿಕೊಂಡ ಬೆಂಕಿ ಇಡೀ ಕಾರಿಗೆ ಆವರಿಸಿದೆ.
ಬೆಂಕಿ ಹೊತ್ತಿಕೊಂಡ ತಕ್ಷಣವೇ ಚಾಲಕ ಅನಂತರಾಘವನ್ ಕಾರಿನಿಂದ ಇಳಿದು ಓಡಿ ಹೋಗಿ ಜೀವ ಉಳಿಸಿಕೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ದೇವನಹಳ್ಳಿ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
Next Story