ನ್ಯಾಯಾಂಗ ಬಂಧನದಲ್ಲಿರುವ ಮಂಜೇಶ್ವರ ಶಾಸಕ ಕಮರುದ್ದೀನ್ ಆಸ್ಪತ್ರೆಗೆ ದಾಖಲು
ಕಾಸರಗೋಡು, ನ.17: ಜ್ಯುವೆಲ್ಲರಿ ಠೇವಣಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಂಗ ಬಂಧನದಲ್ಲಿರುವ ಮಂಜೇಶ್ವರ ಶಾಸಕ ಎಂ.ಸಿ.ಕಮರುದ್ದೀನ್ ರನ್ನು ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಕ್ತದೊತ್ತಡ ಅಧಿಕಗೊಂಡ ಹಿನ್ನೆಲೆಯಲ್ಲಿ ಕಮರುದ್ದೀನ್ ರನ್ನು ಕಾಞ೦ಗಾಡ್ ಜಿಲ್ಲಾ ಜೈಲಿನಿಂದ ಕಾಸರಗೋಡು ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಧುಮೇಹ ಪ್ರಮಾಣ ಹೆಚ್ಚಾಗಿದ್ದು, ಅಗತ್ಯ ಬಿದ್ದಲ್ಲಿ ಕಣ್ಣೂರು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ಯಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.
Next Story