ಉಡುಪಿ: ಅನುಮತಿ ಇಲ್ಲದೆ ಪ್ರತಿಭಟನೆ; ಸಿಎಫ್ಐ ಕಾರ್ಯಕರ್ತರು ಪೊಲೀಸ್ ವಶಕ್ಕೆ
ಉಡುಪಿ, ಡಿ.12: ಸಿಎಫ್ಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯನ್ನು ಈಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿರುವುದನ್ನು ವಿರೋಧಿಸಿ ಇಂದು ಉಡುಪಿ ನಗರದ ಕ್ಲಾಕ್ ಟವರ್ ಎದುರು ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಿದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಇದರ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.
ಏಕಾಏಕಿ ಪ್ರತಿಭಟನೆ ನಡೆಸಿದ ಸಿಎಫ್ಐ ಕಾರ್ಯಕರ್ತರು ಸರಕಾರ ಹಾಗೂ ಸಂಘಪರಿವಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಉಡುಪಿ ನಗರ ಎಸ್ಸೈ ಸಕ್ತಿವೇಲು ನೇತೃತ್ವದ ಪೊಲೀಸರು, ಪ್ರತಿಭಟನೆ ಕೈಬಿಡುವಂತೆ ಪ್ರತಿಭಟನಕಾರರಿಗೆ ಸೂಚಿಸಿದರು. ಆದರೂ ಸಿಎಫ್ಐ ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತ ಪ್ರತಿ ಭಟನೆ ಮುಂದುವರೆಸಿದರು.
ಈ ವೇಳೆ ಪೊಲೀಸರು ಹಾಗೂ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಬಳಿಕ ಪೊಲೀಸರು ಮುಖಂಡರನ್ನು ವಶಕ್ಕೆ ಪಡೆದುಕೊಂಡು ಠಾಣೆಗೆ ಕರೆದೊಯ್ದರು.
ಈ ಸಂದರ್ಭದಲ್ಲಿ ಸಿಎಫ್ಐ ಜಿಲ್ಲಾಧ್ಯಕ್ಷ ನವಾಝ್ ಬ್ರಹ್ಮಾವರ, ಮುಖಂಡ ರಾದ ಒಸಾಮ ಗಂಗೊಳ್ಳಿ, ಝಿಶಾನ್ ಕಂಡ್ಲೂರು, ಮಸೂದ್ ಬ್ರಹ್ಮಾವರ ಮೊದಲಾದವರು ಹಾಜರಿದ್ದರು.