ಪಡುಬಿದ್ರೆ : ಅಂತರಾಷ್ಟ್ರೀಯ ಬ್ಲೂ ಫ್ಲ್ಯಾಗ್ ಬೀಚ್ ಉದ್ಘಾಟನೆಯಲ್ಲಿ ಗೊಂದಲದ ವಾತಾವರಣ
ಪಡುಬಿದ್ರೆ : ಅಂತರಾಷ್ಟ್ರೀಯ ಬ್ಲೂಫ್ಲ್ಯಾಗ್ ಬೀಚ್ ಕಡಲ ತೀರದ ಉದ್ಘಾಟನಾ ಸಮಾರಂಭದ ಕೊನೆಯಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.
ಪ್ರಮುಖ ವ್ಯಕ್ತಿಗಳಿಗೆ ಸ್ಮರಣಿಕೆಯನ್ನು ನೀಡಲು ಸಾಗರ್ ವಿದ್ಯಾಮಂದಿರದ ಸಂಚಾಲಕ ಸುಕುಮಾರ್ ಶ್ರೀಯಾನ್ ಅವರನ್ನು ವೇದಿಕೆಗೆ ಅಧಿಕಾರಿಗಳು ಬರುವಂತೆ ಮನವಿ ಮಾಡಿದರು. ಈ ವೇಳೆ ಪಡುಬಿದ್ರೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಅಶೋಕ್, ಅವರನ್ನು ವೇದಿಕೆಗೆ ಹೋಗದಂತೆ ತಡೆದು ಈ ಕಾರ್ಯಕ್ರಮದಲ್ಲಿ ಸ್ಥಳೀಯರನ್ನು ಕಡೆಗಣಿಸಲಾಗಿದೆ. ಸ್ಥಳೀಯರು ಈ ಬೀಚ್ಗಾಗಿ ಸೇವೆ ಮಾಡಿದ್ದಾರೆ. ಆದರೆ ಅದನ್ನು ಅಧಿಕಾರಿಗಳು ಮರೆತಿದ್ದಾರೆ. ಅಲ್ಲದೆ ಇಲ್ಲಿಗೆ ಬೇಕಾದ ಮೂಲ ಸೌಕರ್ಯಗಳನ್ನು ಮಾಡದೆ ಸ್ಥಳೀಯರನ್ನು ಕಡೆಗಣಿಸಿ ಬೀಚ್ ಉದ್ಘಾಟಿಸಲಾಗಿದೆ ಎಂದು ಈ ಕ್ರಮವನ್ನು ಅವರು ಪ್ರಶ್ನಿಸಿದರು.
ಈ ವೇಳೆ ವೇದಿಕೆಯಲ್ಲಿದ್ದ ಶಾಸಕ ಲಾಲಾಜಿ ಮೆಂಡನ್, ಜಿಲ್ಲಾಧಿಕಾರಿ ಜಿ. ಜಗದೀಶ್ ಉಪಸ್ಥಿತರಿದ್ದರು. ಯಾವುದೇ ಕಾರಣಕ್ಕೂ ಸ್ಥಳೀಯರನ್ನು ಕಡೆಗಣಿಸಿಲ್ಲ. ಅಲ್ಲದೆ ಇಲ್ಲಿನ ಸಮಸ್ಯೆಗಳತ್ತ ಗಮನಹರಿಸಲಾಗುವುದು ಎಂದು ಹೇಳುವ ಮೂಲಕ ಸಮಾಧಾನ ಪಡಿಸಿದರು.