ರೈತಸಂತೆ ನೋಂದಣಿಗೆ ಸೂಚನೆ
ಉಡುಪಿ, ಜ.5: ನಗರದ ದೊಡ್ಡಣಗುಡ್ಡೆಯ ಶಿವಳ್ಳಿ ತೋಟಗಾರಿಕೆ ಕ್ಷೇತ್ರದ ರೈತ ಸೇವಾಕೇಂದ್ರದ ಆವರಣದಲ್ಲಿ ಪ್ರತಿ ಗುರುವಾರ ರೈತಸಂತೆ ನಡೆಯಲಿದ್ದು, ರೈತ ಸಂತೆಯಲ್ಲಿ ಭಾಗವಹಿಸಲು ಇಚ್ಛಿಸುವ ರೈತರು ಹಾಗೂ ಇತರೆ ಯಾವುದೇ ರೈತ ಸಂಘ, ಸಂಸ್ಥೆಳು ನೋಂದಣಿ ಮಾಡಿಕೊಳ್ಳಬೇಕು.
ಆಸಕ್ತರು ನೋಂದಣಿ ಅರ್ಜಿಯನ್ನು ಜ.25ರ ಒಳಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿಲ್ಲಾ ಪಂಚಾಯತ್ ಉಡುಪಿ, ದೂ.ಸಂ: 0820-2522837, ಕುಂದಾಪುರ ದೂ.ಸಂ: 08254-230813, ಕಾರ್ಕಳ ದೂ.ಸಂ: 08258-230288, ತೋಟಗಾರಿಕೆ ಮಾಹಿತಿ ಮತ್ತು ಸಲಹಾ ಕೇಂದ್ರ ಉಡುಪಿ ದೂ.ಸ: 0820-2520590 ಈ ಕಛೇರಿಗಳಲ್ಲಿ ಪಡೆದು, ಪೋಟೋ, ಆಧಾರ್ ಕಾರ್ಡ್, ಪಹಣಿಯೊಂದಿಗೆ ಸಲ್ಲಿಸುವಂತೆ ಜಿಪಂ ತೋಟಗಾರಿಕೆ ಇಲಾಖೆಯ ಉಪನಿದೇಶರ್ಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story