ಜ.15: ಎಸ್ಪಿ ಕಚೇರಿ ಚಲೋ
ಮಂಗಳೂರು, ಜ.12: ಗ್ರಾಪಂ ಚುನಾವಣೆಯ ಮತ ಎಣಿಕೆಯ ಸಂದರ್ಭ ಉಜಿರೆಯ ಮತ ಎಣಿಕಾ ಕೇಂದ್ರದ ಹೊರಗೆ ಎಸ್ಡಿಪಿಐ ಕಾರ್ಯಕರ್ತರು ಪಾಕ್ ಪರ ಘೋಷಣೆ ಕೂಗಿದ್ದಾರೆ ಎಂಬ ಖಾಸಗಿ ಸುದ್ದಿ ವಾಹಿನಿಯ ಸುಳ್ಳು ವರದಿ ಪ್ರಸಾರ ಮಾಡಿದ್ದನ್ನೇ ಆಧರಿಸಿ ಬೆಳ್ತಂಗಡಿ ಪೊಲೀಸರು ಸುಳ್ಳು ಪ್ರಕರಣ ದಾಖಲಿಸಿದ್ದರು. ಆದರೆ ಉಜಿರೆಯ ಎಣಿಕಾ ಕೇಂದ್ರದ ಹೊರಗಡೆ ಕೇಸರಿ ಧ್ವಜವನ್ನು ಹಿಡಿದಿದ್ದ ಬಿಜೆಪಿ-ಸಂಘಪರಿವಾರದ ಕಾರ್ಯಕರ್ತರು ಪಾಕ್ ಪರವಾಗಿ ಘೋಷಣೆ ಕೂಗುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡತೊಡಗಿದ್ದವು. ಈ ಬಗ್ಗೆ ಜಿಲ್ಲಾಧ್ಯಂತ ಪ್ರತಿಭಟನೆಗಳನ್ನು ನಡೆಸಿ ನೈಜ ಆರೋಪಿಗಳಾದ ಸಂಘಪರಿವಾರದ ಕಾರ್ಯಕರ್ತರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದರೂ ಪೊಲೀಸರು ಸ್ಪಂದಿಸದರ ಕಾರಣ ಜ.15ರಂದು ಅಪರಾಹ್ನ 2:30ಕ್ಕೆ ನಗರದ ಹಂಪನಕಟ್ಟೆಯ ಕ್ಲಾಕ್ ಟವರ್ನಿಂದ ‘ಎಸ್ಪಿ ಕಚೇರಿ ಚಲೋ’ ಜನಾಂದೋಲನ ನಡೆಸಲಾಗುವುದು ಎಂಧು ಎಸ್ಡಿಪಿಐ ಜಿಲ್ಲಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story