ಎ.26ರಂದು ಸಜೀಪ ಮುನ್ನೂರು ಮೂರ್ತೆದಾರರ ಸೇ.ಸ.ಸಂಘದ ವಾಮದಪದವು ಶಾಖೆ ಉದ್ಘಾಟನೆ
ಬಂಟ್ವಾಳ, ಎ.20: ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ನಿ. ಇದರ ನೂತನ ವಾಮದಪದವು ಶಾಖೆಯು ವಾಮದಪದವು ಅಶ್ವಿನಿ ಕಾಂಪ್ಲೆಕ್ಸ್ ನಲ್ಲಿ ಎ.26ರಂದು ಬೆಳಗ್ಗೆ 9:30ಕ್ಕೆ ಶುಭಾರಂಭಗೊಳ್ಳಲಿದೆ ಎಂದು ಸಂಘದ ಅಧ್ಯಕ್ಷ ಕೆ.ಸಂಜೀವ ಪೂಜಾರಿ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ಮಾಜಿ ಸಚಿವ ಬಿ.ರಮಾನಾಥ ರೈ ನೂತನ ಶಾಖೆಯನ್ನು ಉದ್ಘಾಟಿಸುವರು. ಬಲ್ಯೊಟ್ಟು ಹೊಸ್ಮಾರು ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಶೀರ್ವಚನ ನೀಡುವರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಸಭಾಧ್ಯಕ್ಷತೆ ವಹಿಸುವರು. ಕಿಯೋನಿಕ್ಸ್ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ್ ಸೇಫ್ ಲಾಕರನ್ನು, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ ಕಂಪ್ಯೂಟರ್ ವ್ಯವಸ್ಥೆಯನ್ನು ಉದ್ಘಾಟಿಸುವರು. ಜಿ.ಪಂ. ಸದಸ್ಯ ಎಂ.ತುಂಗಪ್ಪ ಬಂಗೇರ ಠೇವಣಿ ಪತ್ರ ಬಿಡುಗಡೆ ಮಾಡಲಿರುವರು ಎಂದು ಅವರು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಹಕಾರ ಸಂಘಗಳ ಸಹಾಯಕ ನಿಬಂಧಕ ಜಿ.ಸುಧೀರ್ ಕುಮಾರ್, ಉಪ್ಪಿನಂಗಡಿ ಮೂರ್ತೆದಾರರ ಸೇ.ಸ. ಸಂಘದ ಅಧ್ಯಕ್ಷೆ ಉಷಾ ಅಂಚನ್, ತಾಪಂ ಸದಸ್ಯರಾದ ರತ್ನಾವತಿ ಜೆ. ಶೆಟ್ಟಿ, ರಮೇಶ್ ಪೂಜಾರಿ ಕುಡುಮೇರು, ಪದ್ಮಾವತಿ ಬಿ.ಪೂಜಾರಿ, ಚೆನ್ನೈತ್ತೋಡಿ ಗ್ರಾಪಂ ಅಧ್ಯಕ್ಷೆ ಭಾರತಿ ರಾಜೇಂದ್ರ ಪೂಜಾರಿ ಕೊರಂಟಬೆಟ್ಟು, ಇರ್ವತ್ತೂರು
ಗ್ರಾ.ಪಂ. ಅಧ್ಯಕ್ಷ ಎಂ.ಪಿ.ಶೇಖರ್, ಪಂಜಿಕಲ್ಲು ಗ್ರಾಪಂ ಅಧ್ಯಕ್ಷ ಸಂಜೀವ ಪೂಜಾರಿ ಪಿಲಿಂಗಾಲು, ಪಿಲಾತಬೆಟ್ಟು ಗ್ರಾಪಂ ಅಧ್ಯಕ್ಷೆ ಹರ್ಷಿಣಿ ಪುಷ್ಪಾನಂದ, ಅಶ್ವಿನಿ ಕಾಂಪ್ಲೆಕ್ಸ್ ಮಾಲಕ ಸಂದೀಪ್ ಶೆಟ್ಟಿ ಪೊಡುಂಬ, ಉದ್ಯಮಿಗಳಾದ ಹಂಝ ಎ.ಬಸ್ತಿಕೋಡಿ, ಲಾದ್ರೂ ಮಿನೇಜಸ್ ಮೊದಲಾದವರು ಭಾಗವಹಿಸಲಿದ್ದಾರೆ ಎಂದರು.
ಸಂಘವು ಮೂರ್ತೆದಾರರ ಶ್ರೇಯೋಭಿವೃದ್ಧಿ ಉದ್ದೇಶದೊಂದಿಗೆ ಮೂವತ್ತು ವರ್ಷಗಳ ಹಿಂದೆ 1991ರಲ್ಲಿ ಬಂಟ್ವಾಳ ತಾಲೂಕಿನ ಸುಭಾಷ್ ನಗರದ ಬ್ರಹ್ಮಶ್ರೀ ನಾರಾಯಣ ಗುರುಮಂದಿರದಲ್ಲಿ ಪ್ರಾರಂಭಗೊಂಡಿತ್ತು. ಸಂಘವು ಹಾಲಿ ಆರ್ಥಿಕ ವರ್ಷದಲ್ಲಿ 35 ಕೋಟಿ ರೂ. ವ್ಯವಹಾರ ನಡೆಸಿದೆ. 3,900 ಸದಸ್ಯರನ್ನು ಹೊಂದಿದೆ. ಸಜೀಪಮುನ್ನೂರಿನಲ್ಲಿ ಕೇಂದ್ರ ಕಚೇರಿಯನ್ನು, ಬೋಳಂತೂರು, ಚೇಳೂರು, ಪಜೀರು ಗ್ರಾಮಗಳಲ್ಲಿ ಶಾಖೆಯನ್ನು ಹೊಂದಿದೆ. ವಾಮದಪದವಿನಲ್ಲಿ ಆರಂಭಗೊಳ್ಳುತ್ತಿರುವುದು
4ನೇ ಶಾಖೆಯಾಗಿದೆ.ಮುಂದಿನ ಹಂತದಲ್ಲಿ ಬಂಟ್ವಾಳ ತಾಲೂಕಿನ ಉಳಿದ ಎಲ್ಲ ಗ್ರಾಮಗಳ ವ್ಯಾಪ್ತಿಯಲ್ಲಿ ಶಾಖೆಯನ್ನು ತೆರೆಯಲು ಕಾರ್ಯಯೋಜನೆ ಹಾಕಿಕೊಳ್ಳಲಾಗಿದೆ ಎಂದು ತಿಳಿಸಿದರು.
ಸಂಘವು ಗುರುಶ್ರೀ ಸ್ವಸಹಾಯ ಗುಂಪುಗಳ ಪ್ರಾಯೋಜಕತ್ವದಲ್ಲಿ ಒಟ್ಟು ಹತ್ತು ಸ್ವಸಹಾಯ ಗುಂಪುಗಳನ್ನು ಹೊಂದಿದೆ. ಸ್ವಸಹಾಯ ಸಂಘದ ಸದಸ್ಯರ ಆರ್ಥಿಕ ಅಭಿವೃದ್ದಿಗೆ ಸ್ವಸಹಾಯ ಸಾಲಗಳನ್ನು ನೀಡುತ್ತಿದೆ ಎಂದು ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಸುಂದರ ಪೂಜಾರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಮತಾ ಜಿ., ಉಪ ಕಾರ್ಯನಿರ್ವಹಣಾಧಿಕಾರಿ ಪಲ್ಲವಿ, ಶಾಖಾ ವ್ಯವಸ್ಥಾಪಕಿ ನಿಶ್ಮಿತಾ ಕೆ., ಆಡಳಿತ ಮಂಡಳಿ ನಿರ್ದೇಶಕರಾದ ರಮೇಶ್ ಅನ್ನಪ್ಪಾಡಿ, ವಿಠಲ ಬೆಳ್ಚಾಡ ಚೇಳೂರು, ಅಶೋಕ್ ಪೂಜಾರಿ ಕೋಮಾಲಿ, ಗಿರೀಶ್ ಕುಮಾರ್ ಪೆರ್ವ, ಜಯಶಂಕರ್ ಕಾನ್ಸಾಲೆ, ಕೆ.ಸುಜಾತಾ ಎಂ., ವಾಣಿ ವಸಂತ ಮೊದಲಾದವರು ಉಪಸ್ಥಿತರಿದ್ದರು.