ಪ.ಜಾತಿಯ ಕಾನೂನು ಪದವೀಧರರಿಗೆ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ
ಉಡುಪಿ, ಎ.27: ಪ್ರಸ್ತುತ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ಮೂಲಕ ಪರಿಶಿಷ್ಟ ಜಾತಿಯ ಕಾನೂನು ಪದವೀಧರರು ಹಿರಿಯ ವಕೀಲರ ಬಳಿ ತರಬೇತಿ ಪಡೆಯುವ ಅವಧಿಯಲ್ಲಿ ಶಿಷ್ಯವೇತನ ಪಡೆಯಲು ಅರ್ಹ ಅ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಎ.30 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್ಸೈಟ್- www.sw.kar.nic.in- ಅಥವಾ ಆಯಾ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿದೇಶರ್ಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story