ವಿಠಲ ಶಾಂತಿ
ಕೊಣಾಜೆ: ಕಂಕನಾಡಿಯ ಶ್ರೀ ಬ್ರಹ್ಮ ಬೈದರ್ಕಳ ದೇವಸ್ಥಾನದ ಹಿರಿಯ ಅರ್ಚಕ ಬಂಟ್ವಾಳ ತಾಲೂಕು ಪಜೀರು ಪಾದೆ ನಿವಾಸಿ ವಿಠಲ ಶಾಂತಿ(82) ಸೋಮವಾರ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಆರು ಮಂದಿ ಪುತ್ರಿಯರನ್ನು ಅಗಲಿದ್ದಾರೆ.
ಕಂಕನಾಡಿಯ ಶ್ರೀ ಬ್ರಹ್ಮ ಬೈದರ್ಕಳ ದೇವಸ್ಥಾನದಲ್ಲಿ ಸುಮಾರು 26ವರ್ಷಗಳ ಕಾಲ ಅರ್ಚಕರಾಗಿ ಸೇವೆ ಸಲ್ಲಿಸಿದ್ದ ಅವರು ಅಸೈಗೋಳಿ ದಡಸ್ ನ ಶ್ರೀ ಆದಿಶಕ್ತಿ ದೇವಸ್ಥಾನದಲ್ಲಿ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು.
ಜಿಲ್ಲೆಯ ಹಲವು ಧಾರ್ಮಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದ ಇವರು ಹಲವಾರು ಸಂಘ ಸಂಸ್ಥೆಗಳಲ್ಲಿ ಮಾರ್ಗದರ್ಶಕರಾಗಿ ಸಾಮಾಜಿಕವಾಗಿ ತೊಡಗಿಸಿಕೊಂಡಿದ್ದರು.
Next Story