ನಿವೃತ್ತ ಎಸ್ಸೈ ವಿಶ್ವನಾಥ್
ಮಂಗಳೂರು, ಮೇ 28: ನಿವೃತ್ತ ಎಸ್ಸೈ ವಿಶ್ವನಾಥ್ (67) ಅಸೌಖ್ಯದಿಂದ ಗುರುವಾರ ನಗರ ಹೊರವಲಯದ ಕುಂಜತ್ತೂರಿನ ಸ್ವಗೃಹದಲ್ಲಿ ನಿಧನ ಹೊಂದಿದರು.
ಮೃತರು ಪತ್ನಿಯನ್ನು ಅಗಲಿದ್ದಾರೆ. ಒಂದು ತಿಂಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಕಾನ್ಸ್ಟೆಬಲ್ ಆಗಿ ಕರ್ನಾಟಕ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡಿದ್ದ ಅವರು ಮಂಗಳೂರಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ ಎಸ್ಸೈ ಆಗಿ ನಿವೃತ್ತಿ ಹೊಂದಿದ್ದರು.
ಬಂದರ್ ಮತ್ತು ಬಳಿಕ ಕದ್ರಿ ಠಾಣೆಯಲ್ಲಿ ಎಎಸ್ಐ ಆಗಿ, ಡಿಸಿಐಬಿ/ಸಿಸಿಬಿಯಲ್ಲಿ ಎಸ್ಸೈ ಆಗಿ ಸೇವೆ ಸಲ್ಲಿಸಿದ್ದರು. ಡಿಸಿಐಬಿ/ಸಿಸಿಬಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಹಲವು ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚಿದ್ದರು.
Next Story