ಕೋವಿಡ್ ಸೋಂಕಿತರಿಗೆ ಲಸಿಕೆ ನೀಡುವ ಅಗತ್ಯವಿಲ್ಲ: ಪ್ರಧಾನಿ ಮೋದಿಗೆ ಆರೋಗ್ಯ ತಜ್ಞರ ಸಲಹೆ
ಯೋಜನೆರಹಿತ ವ್ಯಾಕ್ಸಿನೇಷನ್ ರೂಪಾಂತರಿತ ತಳಿಗಳನ್ನು ಉತ್ತೇಜಿಸುತ್ತದೆ
ಹೊಸದಿಲ್ಲಿ:ಈಗಾಗಲೇ ಕೊರೋನ ವೈರಸ್ ಸೋಂಕಿಗೆ ಒಳಗಾಗಿರುವ ಜನರಿಗೆ ಲಸಿಕೆ ನೀಡುವ ಅಗತ್ಯವಿಲ್ಲ ಎಂದು ಸಾರ್ವಜನಿಕ ಆರೋಗ್ಯ ತಜ್ಞರ ಗುಂಪು ಜೂನ್ 6 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಿಸಿದ ವರದಿಯಲ್ಲಿ ಸಲಹೆ ನೀಡಿದೆ.
ಸಾಮೂಹಿಕ, ವಿವೇಚನೆಯಿಲ್ಲದ ಹಾಗೂ ಅಪೂರ್ಣವಾದ ವ್ಯಾಕ್ಸಿನೇಷನ್ ರೂಪಾಂತರಿತ ತಳಿಗಳ ಹೊರಹೊಮ್ಮುವಿಕೆಯನ್ನು ಪ್ರಚೋದಿಸುತ್ತದೆ ಎಂದು ಏಮ್ಸ್ ನ ವೈದ್ಯರು ಹಾಗೂ ಕೋವಿಡ್ -19 ರ ರಾಷ್ಟ್ರೀಯ ಕಾರ್ಯಪಡೆಯ ಸದಸ್ಯರು ಸೇರಿದಂತೆ ಸಾರ್ವಜನಿಕ ಆರೋಗ್ಯ ತಜ್ಞರ ಸಮೂಹ ಹೇಳಿದೆ.
ತಮ್ಮ ಇತ್ತೀಚಿನ ವರದಿಯಲ್ಲಿ, ಭಾರತೀಯ ಸಾರ್ವಜನಿಕ ಆರೋಗ್ಯ ಸಂಘ (ಐಪಿಎಚ್ಎ), ಇಂಡಿಯನ್ ಅಸೋಸಿಯೇಷನ್ ಆಫ್ ಪ್ರಿವೆಂಟಿವ್ ಆ್ಯಂಡ್ ಸೋಶಿಯಲ್ ಮೆಡಿಸಿನ್ (ಐಎಪಿಎಸ್ಎಂ) ಹಾಗೂ ಇಂಡಿಯನ್ ಅಸೋಸಿಯೇಷನ್ ಆಫ್ ಎಪಿಡೆಮಿಯಾಲಜಿಸ್ಟ್ಸ್ (ಐಎಇ) ತಜ್ಞರು, ಮಕ್ಕಳನ್ನು ಒಳಗೊಂಡಂತೆ ವ್ಯಾಪಕ ಚುಚ್ಚುಮದ್ದಿನ ಬದಲು ದುರ್ಬಲ ಹಾಗೂ ಅಪಾಯದಲ್ಲಿರುವವರಿಗೆ ಲಸಿಕೆ ಹಾಕುವುದು ಸದ್ಯದ ಗುರಿಯಾಗಿರಬೇಕು ಎಂದು ಹೇಳಿದೆ.
Next Story