ತೆಂಗಿನ ಮರ ಮೈಮೇಲೆ ಬಿದ್ದು ಆರು ವರ್ಷದ ಬಾಲಕ ಮೃತ್ಯು
ಮೈಸೂರು : ಮನೆಯ ಮುಂದೆ ಇರುವ ತೋಟದಲ್ಲಿ ಆಟ ಆಡುತ್ತಿದ್ದ ಬಾಲಕನ ಮೇಲೆ ತೆಂಗಿನ ಮರ ಬಿದ್ದ ಪರಿಣಾಮ ಬಾಲಕ ಮೃತಪಟ್ಟ ನಂಜನಗೂಡು ತಾಲ್ಲೂಕು ಕುಪ್ಪರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅಭಯ್ (6) ಮೃತ ಬಾಲಕ ಎಂದು ತಿಳಿದು ಬಂದಿದೆ.
ಅಭಯ್ ಮತ್ತು ಆತನ ಸಹೋದರಿ ಇಬ್ಬರು ಮನೆಯ ಮುಂದೆ ಇರುವ ತೋಟದಲ್ಲಿ ಕ್ರಿಕೆಟ್ ಆಡುತ್ತಿದ್ದರು. ಈ ವೇಳೆ ತೆಂಗಿನ ಮರ ಉರುಳಿ ಬಾಕನ ಮೈಮೇಲೆ ಬಿದ್ದಿದ್ದು, ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಆತನ ಸಹೋದರಿಗೆ ಗಾಯವಾಗಿದ್ದು ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಈ ಸಂಬಂಧ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story