ಸಹ್ಯಾದ್ರಿ ಕಾಲೇಜಿನಲ್ಲಿ ಉಚಿತ ಕೋವಿಡ್ ಲಸಿಕೆ ಶಿಬಿರ
ಮಂಗಳೂರು, ಜೂ.30: ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ನ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಮತ್ತು ಯುವ ರೆಡ್ಕ್ರಾಸ್ ಘಟಕದಿಂದ ನಗರದ ಸಹ್ಯಾದ್ರಿ ಕ್ಯಾಂಪಸ್ನ ನೇತ್ರಾವತಿ ಸಭಾಂಗಣದಲ್ಲಿ ಮಂಗಳವಾರ ಉಚಿತ ಕೋವಿಡ್ ಲಸಿಕೆ ಶಿಬಿರ ಆಯೋಜಿಸಲಾಯಿತು.
ಮಂಗಳೂರು ನಗರ ಉತ್ತರ ಶಾಸಕ ಡಾ.ಭರತ್ ಶೆಟ್ಟಿ, ಜಿಲ್ಲಾ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ಅಧ್ಯಕ್ಷ ಸಿಎ ಶಾಂತರಾಮ್ ಶೆಟ್ಟಿ ಮತ್ತು ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಕಿಶೋರ್ ಕುಮಾರ್ ಲಸಿಕಾ ಶಿಬಿರವನ್ನು ಉದ್ಘಾಟಿಸಿದರು.
ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ನ ಟ್ರಸ್ಟಿಗಳಾದ ದೇವದಾಸ್ ಹೆಗ್ಡೆ, ಜಗನ್ನಾಥ್ ಚೌತಾ, ಪ್ರಾಂಶುಪಾಲ ಡಾ.ರಾಜೇಶ ಎಸ್., ಉಪ ಪ್ರಾಂಶುಪಾಲ ಪ್ರೊ.ಬಾಲಕೃಷ್ಣ ಎಸ್.ಎಸ್., ಅಕಾಡಮಿಕ್ ಅಡ್ಮಿನಿಸ್ಟ್ರೇಟಿವ್ ಆಫೀಸರ್ ಶ್ರೀಲತಾ ಯು.ಎ. ಮತ್ತು ವಿದ್ಯಾರ್ಥಿ ಕೌನ್ಸಿಲರ್ ಅಂಕಿತ್ ಕುಮಾರ್ ಎಸ್. ಉಪಸ್ಥಿತರಿದ್ದರು.
ಲಸಿಕಾ ಅಭಿಯಾನದಲ್ಲಿ 846 ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ಲಸಿಕೆ ನೀಡಲಾಯಿತು. ಅಡ್ಯಾರ್ನ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ.ಸಮವಿತಾ, ಡಾ.ಮರಿಯಮ್ ರಶೀದಾ ಮತ್ತು ಅವರ ತಂಡ ಲಸಿಕಾ ಅಭಿಯಾನ ನಡೆಸಿದರು. ಈ ಸಂದರ್ಭದಲ್ಲಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಸ್ವಯಂ ಸೇವಕರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.