ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆ ಸ್ಟಿಕ್ಕರ್, ಕೈಪಿಡಿ, ಪುಸ್ತಕ ಬಿಡುಗಡೆ
ಉಡುಪಿ, ಜು.3: ಅಂಬಲಪಾಡಿ ಗ್ರಾಮ ಪಂಚಾಯತ್ನಲ್ಲಿ ಇಂದು ಪ್ಲಾಸ್ಟಿಕ್ ರಹಿತ ದಿನದ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಶಾಸಕ ಕೆ.ರಘುಪತಿ ಭಟ್ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸ್ಟಿಕ್ಕರ್ಸ್ ಹಾಗೂ ಇಲಾಖೆಯ ವಿವಿಧ ಕೈಪಿಡಿ, ಪುಸ್ತಕಗಳನ್ನು ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಅಂಬಲಪಾಡಿ ಗ್ರಾಪಂ ಅಧ್ಯಕ್ಷೆ ರೋಹಿಣಿ, ಉಪಾಧ್ಯಕ್ಷ ಸೋಮನಾಥ್ ಬಿ.ಕೆ, ಉಡುಪಿ ತಾಪಂ ಕಾರ್ಯ ನಿರ್ವಹಣಾಧಿಕಾರಿ ಮೋಹನ್ರಾಜ್, ಕಾರ್ಮಿಕ ಇಲಾಖೆಯ ನಿರೀಕ್ಷಕ ಪ್ರವೀಣ್ ಕುಮಾರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಸಂತಿ, ಸದಸ್ಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
Next Story