ವಿಟ್ಲ: ಸಿಡಿಲು ಬಡಿದು ಮೂವರಿಗೆ ಗಾಯ, ಮನೆಗೆ ಹಾನಿ
ಬಂಟ್ವಾಳ, ಜು.7: ಮನೆಗೆ ಸಿಡಿಲು ಬಡಿದು ಮೂವರು ಗಾಯಗೊಂಡು ಮನೆ ಭಾಗಶಃ ಹಾನಿಗೊಂಡ ಘಟನೆ ವೀರಕಂಬ ಗ್ರಾಮದ ಕಲ್ಮಲೆ ಎಂಬಲ್ಲಿ ಸಂಭವಿಸಿದೆ.
ವೀರಕಂಬ ಕಲ್ಮಲೆ ಜಯಂತಿ ಮತ್ತು ರಘುನಾಥ ಶೆಟ್ಟಿ ದಂಪತಿ ಮನೆಗೆ ಸಂಜೆ ವೇಳೆ ಭಾರೀ ಸಿಡಿಲು ಬಡಿದಿದೆ. ಇದರಿಂದ ಮನೆ ಭಾಗಶಃ ಹಾನಿಗೊಂಡಿದೆ. ಮನೆಯಲ್ಲಿದ್ದ ವಿದ್ಯುತ್ ಉಪಕರಣಗಳು ಸಂಪೂರ್ಣವಾಗಿ ನಾಶಗೊಂಡಿದೆ. ಮನೆಯ ಗೋಡೆಗಳು ಬಿರುಕುಗೊಂಡಿದೆ. ಹಂಚುಗಳು ಹಾನಿಗೊಂಡಿದೆ.
ಜಯಂತಿ, ಮಕ್ಕಳಾದ ಪ್ರಜೀತಾ(19) ರಕ್ಷಿತ (24) ಎಂಬವರು ಗಾಯಗೊಂಡಿದ್ದು, ವಿಟ್ಲ ಸಮುದಾಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸ್ಥಳಕ್ಕೆ ವೀರಕಂಬ ಗ್ರಾಮ ಕರಣಿಕ ಕರಿಬಸಪ್ಪ ಭೇಟಿ ನೀಡಿದ್ದಾರೆ.
Next Story