ಉಡುಪಿ: ಮಗುವಿನ ಅಪಹರಣ ಪ್ರಕರಣ; ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ
ಉಡುಪಿ: ಬಾಗಲಕೋಟೆ ಮೂಲದ ಮಗುವಿನ ಅಪಹರಣ ಪ್ರಕರಣದಲ್ಲಿ ಬಂಧಿತ ಆರೋಪಿ ದಾಂಡೇಲಿಯ ಪರಶುರಾಮ ಭೀಮಪ್ಪನನ್ನು ಪೊಲೀಸರು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ರವಿವಾರ ಕುಮಟಾದಲ್ಲಿ ಬಂಧಿಸಿ ಸೋಮವಾರ ಉಡುಪಿಗೆ ಕರೆತರಲಾದ ಪರಶುರಾಮನನ್ನು ಮೂರ್ಚೆ ರೋಗದ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ವೈದ್ಯರ ಸಲಹೆಯಂತೆ ಆತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು.
ನ್ಯಾಯಾಂಗ ಬಂಧನಕ್ಕೆ ಒಳಗಾದ ಈತನನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದ್ದು, ಈತನಿಗೆ ಸೋಂಕು ಇರುವುದು ದೃಢಪಟ್ಟಿತ್ತು. ಅದರಂತೆ ಆತನನ್ನು ಮತ್ತೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story