ಕದ್ರಿ: ಅಕ್ರಮ ಗೂಡಂಗಡಿಗಳ ತೆರವು; ಕಂದಾಯ ಅಧಿಕಾರಿಗಳ ನೇತೃತ್ವದಲ್ಲಿ ಕಾರ್ಯಾಚರಣೆ
ಮಂಗಳೂರು, ಜು.31: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕದ್ರಿ ಪಾರ್ಕ್ ಬಳಿಯ ಅಕ್ರಮ ಗೂಡಂಗಡಿಗಳನ್ನು ಮನಪಾ, ಕಂದಾಯ ಅಧಿಕಾರಿಗಳ ತಂಡ ಶನಿವಾರ ತೆರವುಗೊಳಿಸಿದೆ.
ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್ರ ಸೂಚನೆಯಂತೆ ಕಂದಾಯ ಅಧಿಕಾರಿಗಳ ನೇತೃತ್ವದಲ್ಲಿ ತೆರವು ನಡೆದಿದೆ. ಪಾರ್ಕ್ ಮುಂಭಾಗದಲ್ಲಿದ್ದ 10ಕ್ಕೂ ಅಧಿಕ ಅಕ್ರಮ ಗೂಡಂಗಡಿಗಳನ್ನು ಸಾರ್ವಜನಿಕ ದೂರಿನ ಮೇರೆಗೆ ಅಧಿಕಾರಿಗಳು ಪೊಲೀಸ್ ರಕ್ಷಣೆಯಲ್ಲಿ ತೆರವುಗೊಳಿಸಿದರು.
ಸ್ಮಾಟ್ ಸಿಟಿ ಯೋಜನೆಯಡಿ ರಸ್ತೆ ಅಭಿವೃದ್ಧಿ ಕಾಮಗಾರಿ ಹಾಗೂ ಫುಡ್ ಕೋರ್ಟ್ಗಳ ಕಾಮಗಾರಿ ನಡೆಸಲಾಗುತ್ತದೆ. ಆ ಹಿನ್ನೆಲೆಯಲ್ಲಿ ತೆರವು ಕಾರ್ಯಾಚರಣೆ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ.
ಕಾರ್ಯಾಚರಣೆಯ ಸಂದರ್ಭ ಮನಪಾ ಕಂದಾಯ ಅಧಿಕಾರಿ ಪ್ರವೀಣ್ ಕರ್ಕೇರ ಮತ್ತಿತರರಿದ್ದರು.