ಮೂಡುಬಿದಿರೆ: ರಂಗಸ್ಥಳದಲ್ಲೇ ಕುಸಿದುಬಿದ್ದ ಕಲಾವಿದ
ಮೂಡುಬಿದಿರೆ, ಆ.10: ಇಲ್ಲಿನ ಅಲಂಗಾರಿನಲ್ಲಿ ಸೋಮವಾರ ರಾತ್ರಿ ನಡೆದ ಯಕ್ಷಗಾನದ ವೇಳೆ ಕಲಾವಿದರೊಬ್ಬರು ಕುಸಿದು ಬಿದ್ದಿದ್ದು, ಕೆಲವು ನಿಮಿಷಗಳ ಬಳಿಕ ಚೇತರಿಸಿಕೊಂಡು ಬಳಿಕ ರಂಗಸ್ಥಳದಲ್ಲಿ ಕಾಣಿಸಿಕೊಂಡಿದ್ದಾರೆ.
ಅಲಂಗಾರು ಶ್ರೀಮಹಾಲೀಂಗೇಶ್ವರ ದೇವಸ್ಥಾನದಲ್ಲಿ ಸೋಮವಾರ ರಾತ್ರಿ ಕರ್ಣಪರ್ವ ಪ್ರಸಂಗದಲ್ಲಿ ಖ್ಯಾತ ಕಲಾವಿದ ಮೋಹನ ಕುಮಾರ್ ಅಮ್ಮಂಜೆ ಪಾತ್ರಧಾರಿಯಾಗಿದ್ದರು. ಈ ಸಂದರ್ಭ ಅತೀವ ಬಳಲಿಕೆಯಿಂದ ಅವರು ರಂಗಸ್ಥಳದಲ್ಲಿ ಕುಸಿದು ಬಿದ್ದಿದ್ದು, 15 ನಿಮಿಷಗಳ ಕಾಲ ಯಕ್ಷಗಾನವನ್ನು ಸ್ಥಗಿತಗೊಳಿಸಲಾಯಿತು. ಅಮ್ಮುಂಜೆ ಅವರು ಚೇತರಿಸಿಕೊಂಡ ಬಳಿಕ ಮತ್ತೆ ಅವರು ತಮ್ಮ ಪಾತ್ರವನ್ನು ಮುಂದುವರಿಸಿದರು.
ಈ ಬಗ್ಗೆ ಪ್ರತಿಕ್ರಿಯಿಸಿರುವ ಮೋಹನ್ ಕುಮಾರ್, ಸುಮಾರು ಐದು ತಿಂಗಳ ಬಳಿಕ ಬಣ್ಣ ಹಚ್ಚಿದ್ದರಿಂದ ತಲೆಸುತ್ತು ಬಂದು ಬಿದ್ದಿದ್ದೇನೆ. ತಾನೀಗ ಆರೋಗ್ಯವಾಗಿದ್ದೇನೆ ಎಂದು ಹೇಳಿದ್ದಾರೆ.
Next Story