ಶೇಖರ್
ಮಂಗಳೂರು, ಆ.18: ಕಿನ್ನಿಗೋಳಿ ಸಮೀಪದ ಉಳ್ಳಂಜೆ ನಿವಾಸಿ, ಪತ್ರಿಕಾ ವಿತರಕ ಶೇಖರ್ (49) ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ತಡರಾತ್ರಿ ನಗರದ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮೃತರು ಪತ್ನಿ, ಒಬ್ಬ ಮಗ ಮತ್ತು ಒಬ್ಬರು ಮಗಳನ್ನು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಇವರು ಕಳೆದ ಹಲವು ವರ್ಷಗಳಿಂದ ಪತ್ರಿಕಾ ವಿತರಕರಾಗಿ ಕೆಲಸ ಮಾಡುತ್ತಾ ಸ್ಥಳೀಯವಾಗಿ ಜನಪ್ರಿಯರಾಗಿದ್ದರು.
Next Story