ಉಡುಪಿಯಲ್ಲಿ ಡಿ.ದೇವರಾಜ ಅರಸು ಜಯಂತಿ ಆಚರಣೆ
ಉಡುಪಿ, ಆ.21: ಡಿ.ದೇವರಾಜು ಅರಸು ಅವರ 106ನೇ ಜನ್ಮ ದಿನಾಚರಣೆ ಯನ್ನು ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶುಕ್ರವಾರ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅರಸು ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅರಸು ಅವರ ಬಗ್ಗೆ ವಿಶೇಷ ಉಪನ್ಯಾಸ ನೀಡಿದ ಪ್ರೊ. ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ, ದೇವರಾಜ ಅರಸು ಅವರ ಬಾಲ್ಯದಿಂದ ಹಿಡಿದು, ಕರ್ನಾಟಕದ ಚರಿತ್ರೆಯಲ್ಲಿ ಅರಸುಯುಗ ಎಂದು ದಾಖಲಾಗುವ ವರೆಗಿನ ಜೀವನ ಚರಿತ್ರೆ, ಮುಖ್ಯಮಂತ್ರಿಯಾಗಿ ಕರ್ನಾಟಕದ ಅಭಿವೃದ್ಧಿಗೆ ಅವರ ಕೊಡುಗೆಗಳ ಕುರಿತು ಸವಿಸ್ತಾರವಾಗಿ ತಿಳಿಸಿಕೊಟ್ಟರು.
ಮೈಸೂರು ಎಂಬ ಹೆಸರನ್ನು ಕರ್ನಾಟಕ ರಾಜ್ಯ ನಾಮಕರಣ, ಭೂಸುಧಾರಣೆ ಕಾಯ್ದೆಯ ಜಾರಿ, ಇಂದಿರಾ ಗಾಂಧಿ ಅವರ 20 ಅಂಶಗಳ ಕಾರ್ಯಕ್ರಮವನ್ನು ಜಾರಿಗೊಳಿಸಿದ ಏಕೈಕ ಮುಖ್ಯಮಂತ್ರಿ ಎಂದು ದೇಶದಲ್ಲಿ ಹೆಗ್ಗಳಿಕೆ ಇವರದ್ದಾಗಿದೆ ಎಂದು ಹೇಳಿದರು.
ಉಡುಪಿ ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ವೈ. ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ದೇವೇಂದ್ರ ಎಸ್ ಬಿರದಾರ ಉಪಸ್ಥಿತರಿದ್ದರು. ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ನರಸಿಂಹ ಪೂಜಾರಿ ವಂದಿಸಿದರು.ಲೆಕ್ಕಾಧೀಕ್ಷಕಿ ಸುಗುಣಾ ನಿರೂಪಿಸಿದರು.
ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ನರಸಿಂಹ ಪೂಜಾರಿ ವಂದಿಸಿದರು.ಲೆಕ್ಕಾಧೀಕ್ಷಕಿ ಸುಗುಣಾ ನಿರೂಪಿಸಿದರು.