ಮೂಳೂರು: ರಸ್ತೆ ಅಪಘಾತಕ್ಕೆ ಸ್ಕೂಟರ್ ಸವಾರ ಬಲಿ
ಕಾಪು: ಲಾರಿಗೆ ಸ್ಕೂಟರ್ ಢಿಕ್ಕಿಯಾಗಿ ಸವಾರ ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಉಚ್ಚಿಲ ಸಮೀಪದ ಮೂಳೂರಿನಲ್ಲಿ ಸಂಭವಿಸಿದೆ.
ಮೃತರನ್ನು ಪಡುಬಿದ್ರೆ ನಿವಾಸಿ ಚರಣ್ ಶೆಟ್ಟಿ ಎಂದು ಗುರುತಿಸಲಾಗಿದೆ.
ಇವರು ಉಡುಪಿ ಕಡೆಯಿಂದ ಪಡುಬಿದ್ರೆಯತ್ತ ಸ್ಕೂಟರ್ ಸವಾರಿ ಮಾಡಿಕೊಂಡು ಹೋಗುತ್ತಿದ್ದು, ರಾಷ್ಟ್ರೀಯ ಹೆದ್ದಾರಿ 66 ರ ಮೂಳೂರಿನ ಹೆದ್ದಾರಿ ಪಕ್ಕದಲ್ಲಿ ನಿಲ್ಲಿಸಲಾದ ಲಾರಿಯ ಹಿಂಬದಿಗೆ ಢಿಕ್ಕಿಯಾಗಿದೆ. ಪರಿಣಾಮ ಸ್ಕೂಟರ್ ಲಾರಿಯ ಅಡಿಯಲ್ಲಿ ಸಿಲುಕಿದೆ.
ಘಟನೆಯಿಂದ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಉಡುಪಿಯ ಆಸ್ಪತ್ರೆಗೆ ಸಾಗಿಸಲಾಗಿದ್ದು, ಸವಾರ ಅದಾಗಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
Next Story