ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ತಂಬಾಕು ಮುಕ್ತ ಪ್ರದೇಶ: ಉಡುಪಿ ಡಿಸಿ ಜಗದೀಶ್
ಉಡುಪಿ, ಆ.26: ಮಣಿಪಾಲದಲ್ಲಿರುವ ಉಡುಪಿ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ಯಾವುದೇ ರೀತಿಯ ತಂಬಾಕು ಉತ್ಪನ್ನ ಗಳ ಬಳಕೆ, ಮಾರಾಟ ವನ್ನು ಸಂಪೂರ್ಣವಾಗಿ ನಿಷೇಧಿಸಿ, ಇಡೀ ಪ್ರದೇಶವನ್ನು ತಂಬಾಕು ಮುಕ್ತ ವಲಯವನ್ನಾಗಿ ಘೋಷಿಸು ವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
ಗುರುವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಹಾಗೂ ಜಿಲ್ಲಾ ತಂಬಾಕು ನಿಷೇಧ ಕೋಶದ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಗಳು ಸೇರಿದಂತೆ, ಕಚೇರಿಗಳಿಗೆ ಆಗಮಿಸುವ ಸಾರ್ವಜನಿಕರು, ಆವರಣದಲ್ಲಿ ಯಾವುದೇ ಬಗೆಯ ತಂಬಾಕು ಉತ್ಪನ್ನಗಳ ಬಳಕೆ ಮಾಡುವುದನ್ನು ಕಡ್ಡಾಯ ವಾಗಿ ನಿಷೇಧಿಸ ಲಾಗಿದೆ. ಹಾಗೂ ಆವರಣದಲ್ಲಿರುವ ಕ್ಯಾಂಟೀನ್ ಹಾಗೂ ಇತರೆ ಮಳಿಗೆಗಳಲ್ಲಿ ಸಹ ಕಡ್ಡಾಯವಾಗಿ ಅವುಗಳನ್ನು ಮಾರಾಟ ಮಾಡದಂತೆ ಎಚ್ಚರಿಕೆ ನೀಡಲಾಗಿದೆ.
ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಗಳು ಸೇರಿದಂತೆ, ಕಚೇರಿಗಳಿಗೆ ಆಗಮಿಸುವ ಸಾರ್ವಜನಿಕರು, ಆವರಣದಲ್ಲಿ ಯಾವುದೇ ಬಗೆಯ ತಂಬಾಕು ಉತ್ಪನ್ನಗಳ ಬಳಕೆ ಮಾಡುವುದನ್ನು ಕಡ್ಡಾಯ ವಾಗಿ ನಿಷೇಧಿಸಲಾಗಿದೆ. ಹಾಗೂ ಆವರಣದಲ್ಲಿರುವ ಕ್ಯಾಂಟೀನ್ ಹಾಗೂ ಇತರೆ ಮಳಿಗೆಗಳಲ್ಲಿ ಸಹ ಕಡ್ಡಾಯವಾಗಿ ಅವುಗಳನ್ನು ಮಾರಾಟ ಮಾಡದಂತೆ ಎಚ್ಚರಿಕೆ ನೀಡಲಾಗಿದೆ. ಜಿಲ್ಲೆಯ ಎಲ್ಲಾ ಸರಕಾರಿ ಕಚೇರಿಗಳನ್ನು ತಂಬಾಕು ಮುಕ್ತ ಕಚೇರಿ ಎಂದು ಆಯಾ ಕಚೇರಿಯ ಮುಖ್ಯಸ್ಥರು ಘೋಷಣೆ ಮಾಡುವಂತೆ ತಿಳಿಸಿದ ಜಿಲ್ಲಾಧಿಕಾರಿ, ಈ ಪ್ರದೇಶಗಳಲ್ಲಿ ಆದೇಶ ಮೀರಿ ತಂಬಾಕು ಉತ್ಪನ್ನ ಬಳಸು ವವರ ವಿರುದ್ದ ಸೂಕ್ತ ಕ್ರಮಕೈಗೊಳ್ಳುವಂತೆ ಸಂಬಂದಪಟ್ಟ ಎಲ್ಲಾ ಅಧಿಕಾರಿ ಗಳಿಗೆ ಸೂಚಿಸಿದರು.
ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ತಂಬಾಕು ಮುಕ್ತ ಹಳ್ಳಿ ಎಂದು ಘೋಷಣೆ ಮಾಡುವ ಕುರಿತಂತೆ ಎಲ್ಲಾ ತಾಲೂಕಿನ ಆರೋಗ್ಯಾಧಿ ಕಾರಿಗಳು ತಮ್ಮ ವ್ಯಾಪ್ತಿ ಯ ಯಾವುದಾದರೂ ಒಂದು ಗ್ರಾಮವನ್ನು ಗುರುತಿಸಿ, ಆ ಪ್ರದೇಶದಲ್ಲಿ ಹೆಚ್ಚಿನ ಅರಿವು ಕಾರ್ಯಕ್ರಮ ಗಳನ್ನು ಆಯೋಜಿಸಿ. ಆ ಗ್ರಾಮದಲ್ಲಿ ತಂಬಾಕು ಉತ್ಪನ್ನ ಗಳ ಮಾರಾಟವಾಗದಂತೆ ಮತ್ತು ಸಾರ್ವಜನಿಕರು ಅದರ ಬಳಕೆಯಿಂದ ದೂರವಾಗುವಂತೆ ಚಟುವಟಿಕೆಗಳನ್ನು ಹಮ್ಮಿಕೊಳ್ಳುವಂತೆ ತಿಳಿಸಿದರು.
ಶಾಲಾ-ಕಾಲೇಜುಗಳನ್ನು ತಂಬಾಕು ಮುಕ್ತ ಸಂಸ್ಥೆಗಳನ್ನಾಗಿ ಮಾಡುವ ಉದ್ದೇಶ ದಿಂದ, ಶಿಕ್ಷಣ ಸಂಸ್ಥೆಗಳ 100 ಮೀಟರ್ ಒಳಗೆ ತುಂಬಾಕು ಉತ್ಪನ್ನಗಳ ಮಾರಾಟ ಅಥವಾ ಸೇವನೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಈ ಬಗ್ಗೆ ಜಿಲ್ಲೆಯ ಎಲ್ಲಾ ಸರಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಳು ಕೈಗೊಂಡಿರುವ ಕ್ರಮಗಳ ಬಗ್ಗೆ, ಶಾಲಾ ಕಾಲೇಜು ಮುಖ್ಯಸ್ಥರಿಂದ ಸಂಬಂಧಪಟ್ಟ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ವರದಿ ಪಡೆದು ಸಲ್ಲಿಸುವಂತೆ ತಿಳಿಸಿದರು.
ಜಿಲ್ಲೆಯ ಶಾಲಾ ಕಾಲೇಜುಗಳ ಆವರಣದಲ್ಲಿ ತಂಬಾಕು ಉತ್ಪನ್ನಗಳ ಬಳಕೆ ಕುರಿತಂತೆ ಮಣಿಪಾಲದ ಕೆಎಂಸಿ ಸಮುದಾಯದ ವೈದ್ಯಕೀಯ ವಿಭಾಗ ನಡೆಸಿದ ಸಮೀಕ್ಷೆ ವರದಿಯನ್ನು ಪರಿಶೀಲಿಸಿ, ಹೆಚ್ಚಿನ ಸಂಖ್ಯೆಯಲ್ಲಿ ತಂಬಾಕು ಉತ್ಪನ್ನ ಬಳಕೆ ಇರುವ ಶಾಲಾ ಕಾಲೇಜುಗಳನ್ನು ಗುರುತಿಸಿ, ಅಗತ್ಯ ನಿಯಂತ್ರಣ ಕ್ರಮ ಗಳನ್ನು ಕೈಗೊಳ್ಳುವಂತೆ ಸೂಚಿಸಿದರು.
ಪ್ರಸಕ್ತ ಸಾಲಿನಲ್ಲಿ ಜುಲೈ ಅಂತ್ಯದವರೆಗೆ ಕೋಟ್ಪಾ ನಿಯಂತ್ರಣ ತನಿಖಾ ದಳ ದಿಂದ ಒಟ್ಟು 103 ಕಾನೂನು ಉಲ್ಲಂಘನೆ ಪ್ರಕರಣ ದಾಖಲಿಸಿ17,000 ದಂಡ ಸಂಗ್ರಹಿಸಲಾಗಿದೆ ಎಂದು ಜಿಲ್ಲಾ ಸವೇರ್ಕ್ಷಣಾಧಿಕಾರಿ ಡಾ.ನಾಗರತ್ನ ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಪಂ ಉಪ ಕಾರ್ಯ ದರ್ಶಿ ಕಿರಣ್ ಫಡ್ನೇಕರ್, ಎಎಸ್ಪಿ ಕುಮಾರಚಂದ್ರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ್ ಉಡುಪ, ಜಿಲ್ಲಾ ಸರ್ಜನ್ ಡಾ. ಮಧುಸೂಧನ್ ನಾಯಕ್, ಆರೋಗ್ಯ ಇಲಾಖೆ ಮತ್ತು ವಿವಿಧ ಇಲಾಖೆ ಗಳ ಅಧಿಕಾರಿಗಳು ಉಪಸ್ಥಿತರಿದ್ದರು.