ಭಾರತ್ ಬಂದ್; ರಾಜಧಾನಿ ಬೆಂಗಳೂರಿನಲ್ಲಿ ಪ್ರತಿಭಟನಾ ಮೆರವಣಿಗೆ
photo: twitter@Kisanektamorcha
ಬೆಂಗಳೂರು: ಕೇಂದ್ರ ಸರಕಾರದ ವಿವಾದಿತ ಕೃಷಿ ಕಾಯ್ದೆ ವಿರೋಧಿಸಿ ವಿವಿಧ ಸಂಘೆನೆ್ಗಳು ಕರೆ ನೀಡಿರುವ 'ಭಾರತ್ ಬಂದ್' ಗೆ ರಾಜ್ಯದಲ್ಲೂ ಹಲವು ಸಂಘಟನೆಗಳಿಂದ ಬೆಂಬಲ ವ್ಯಕ್ತವಾಗಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಪ್ರತಿಭಟನಾ ಮೆರವಣಿಗೆ ಆರಂಭವಾಗಿದೆ.
ಆನಂದ ರಾವ್ ವೃತ್ತದಲ್ಲಿನ ಗಾಂಧಿ ಪುತ್ಥಳಿಯಿಂದ ಫ್ರೀಡಂ ಪಾರ್ಕ್, ಕೆ.ಆರ್ ವೃತ್ತದಿಂದ ನೃತಪತುಂಗ ರಸ್ತೆ ಮೂಲಕ ಸಾಗುತ್ತಿರುವ ಮೆರವಣಿಗೆ ಮೈಸೂರು ಬ್ಯಾಂಕ್ ವೃತ್ತದಲ್ಲಿ ಮುಕ್ತಾಯುವಾಗಲಿದೆ.
ಪ್ರತಿಭಟನೆ ಹಿನ್ನೆಲೆಯಲ್ಲಿ ನಗರದಲ್ಲಿ 11 ಡಿಸಿಪಿ, ಇಬ್ಬರು ಜಂಟಿ ಆಯುಕ್ತರು, ಇಬ್ಬರು ಹೆಚ್ಚುವರಿ ಆಯುಕ್ತರು ಗಸ್ತಿನಲ್ಲಿರುತ್ತಾರೆ. ಸ್ಥಳೀಯ ಪೊಲೀಸರ ಜೊತೆಗೆ 45 ಕೆಎಸ್ಸಾಆರ್ಪಿ 21 ಸಿಎಆರ್ ತುಕಡಿಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ.
Next Story