ರಾಜ್ಯದಲ್ಲಿಂದು 504 ಮಂದಿಗೆ ಕೊರೋನ ದೃಢ, 20 ಮಂದಿ ಸಾವು
ಬೆಂಗಳೂರು, ಸೆ.27: ರಾಜ್ಯದಲ್ಲಿ ಸೋಮವಾರ 504 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 20 ಜನರು ಸೋಂಕಿಗೆ ಬಲಿಯಾಗಿದ್ದು, 893 ಜನರು ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 29,73,899ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 37,746ಕ್ಕೆ ತಲುಪಿದೆ.
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 12,804ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.
20 ಸೋಂಕಿತರು ಬಲಿ: ಬಾಗಲಕೋಟೆ 1, ಬೆಂಗಳೂರು ನಗರ 5, ಚಿಕ್ಕಮಗಳೂರು 1, ದಕ್ಷಿಣ ಕನ್ನಡ 4, ಹಾಸನ 1, ಕೋಲಾರ 1, ಮಂಡ್ಯ 2, ಮೈಸೂರು 3, ತುಮಕೂರು 1, ಉಡುಪಿ ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.
ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 504 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಳ್ಳಾರಿ 3, ಬೆಳಗಾವಿ 4, ಬೆಂಗಳೂರು ಗ್ರಾಮಾಂತರ 14, ಬೆಂಗಳೂರು ನಗರ 181, ಬೀದರ್ 1, ಚಾಮರಾಜನಗರ 4, ಚಿಕ್ಕಮಗಳೂರು 19, ಚಿತ್ರದುರ್ಗ 7, ದಕ್ಷಿಣ ಕನ್ನಡ 83, ದಾವಣಗೆರೆ 2, ಹಾಸನ 18, ಕಲಬುರಗಿ 1, ಕೊಡಗು 26, ಕೋಲಾರ 11, ಮಂಡ್ಯ 8, ಮೈಸೂರು 47, ರಾಯಚೂರು 1, ಶಿವಮೊಗ್ಗ 18, ತುಮಕೂರು 20, ಉಡುಪಿ 24, ಉತ್ತರ ಕನ್ನಡ ಜಿಲ್ಲೆಯಲ್ಲಿ 12 ಪ್ರಕರಣ ಪತ್ತೆಯಾಗಿವೆ.
ರಾಜಧಾನಿಯಲ್ಲಿ 181 ಜನರಿಗೆ ಕೊರೋನ ದೃಢ
ರಾಜಧಾನಿಯಲ್ಲಿ ಸೋಮವಾರದಂದು 181 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, 5 ಜನರು ಸೋಂಕಿಗೆ ಬಲಿಯಾಗಿದ್ದಾರೆ.
ನಗರದಲ್ಲಿ ಇಲ್ಲಿಯವರೆಗೆ ಒಟ್ಟು 12,45,671 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,137 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು 12,22,139 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.