ಸಿಂಧಗಿ ಉಪಚುನಾವಣೆ; ಅಂತಿಮ ಕಣದಲ್ಲಿ ಆರು ಅಭ್ಯರ್ಥಿಗಳು
ಬೆಂಗಳೂರು, ಅ. 13: ಸಿಂಧಗಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಇಬ್ಬರು ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಹಿಂಪಡೆದಿದ್ದು, ಆಡಳಿತಾರೂಢ ಬಿಜೆಪಿ, ಪ್ರತಿಪಕ್ಷ ಕಾಂಗ್ರೆಸ್, ಜೆಡಿಎಸ್ ಸಹಿತ ಆರು ಮಂದಿ ಅಭ್ಯರ್ಥಿಗಳು ಅಂತಿಮ ಕಣದಲ್ಲಿ ಇದ್ದಾರೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾದ ಇಂದು ರಾಷ್ಟ್ರೀಯ ಸಮಾಜ ಪಕ್ಷದ ವಿಕ್ರಮ ಪಂಡಿತ ಹಾಗೂ ಪಕ್ಷೇತರ ಅಭ್ಯರ್ಥಿ ದುಂಡಸಿ ಅಬ್ದುಲ್ ರೆಹ್ಮಾನ್ ಮುಹಮ್ಮದ್ ಹನೀಫ್ ತಮ್ಮ ನಾಮಪತ್ರ ಹಿಂಪಡೆದಿದ್ದಾರೆ. ಕಾಂಗ್ರೆಸ್ ಪಕ್ಷದ ಅಶೋಕ್ ಮನಗೂಳಿ, ಜೆಡಿಎಸ್ನ ನಾಝೀಯಾ ಅಂಗಡಿ, ಬಿಜೆಪಿಯ ರಮೇಶ್ ಬಾಳಪ್ಪ ಭೂಸನೂರ, ಕರ್ನಾಟಕ ರಾಷ್ಟ್ರ ಸಮಿತಿಯ ಡಾ.ಸುನೀಲ್ ಕುಮಾರ್ ಹೆಬ್ಬಿ, ಪಕ್ಷೇತರ ಅಭ್ಯರ್ಥಿಗಳಾದ ಜೀಲಾನಿ ಗುಡುಸಾಬ ಮುಲ್ಲಾ ಹಾಗೂ ದೀಪಿಕಾ ಎಸ್. ಅವರು ಅಂತಿಮ ಕಣದಲ್ಲಿದ್ದಾರೆ ಎಂದು ಆಯೋಗದ ಪ್ರಕಟಣೆ ತಿಳಿಸಿದೆ.
Next Story