ಕಾರ್ಕಳ: ಅಪರಾಧ ತಡೆ ಮಾಸಾಚರಣೆ
ಕಾರ್ಕಳ: ಕಾರ್ಕಳದ ಮಂಜುನಾಥ ಪೈ ಸ್ಮಾರಕ, ಸರಕಾರಿ ಪ್ರಥಮ ದರ್ಜೆ ಕಾಲೇಜು, ಇದರ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತ್ತು ರೋಟರಿ ಕ್ಲಬ್ ಕಾರ್ಕಳ, ರೋಟ್ರಾಕ್ಟ್ ಕ್ಲಬ್ ಕಾರ್ಕಳ ಮತ್ತು ಕಾರ್ಕಳ ನಗರ ಠಾಣಾ ಪೊಲೀಸರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ಅಪರಾಧ ತಡೆ ಮಾಸ ಕಾರ್ಯಾಚರಣೆ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳಿಗೆ ಕಾನೂನಿನ ಬಗ್ಗೆ ಮಾಹಿತಿ ಹಾಗೂ ಅಪರಾಧ ತಡೆಯುವಲ್ಲಿ ಹಾಗು ಅಪರಾಧ ಪತ್ತೆ ಹಚ್ಚುವಲ್ಲಿ ವಿದ್ಯಾರ್ಥಿಗಳ ಹಾಗು ಸಾರ್ವಜನಿಕರ ಪಾತ್ರ ದ ಬಗ್ಗೆ ಕಾರ್ಕಳ ಪೊಲೀಸ್ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ವಿಜಯಪ್ರಸಾದ್ ರವರು ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದಲ್ಲಿ ಕಾರ್ಕಳ ಪೊಲೀಸ್ ವೃತ್ತ ನಿರೀಕ್ಷಕರಾದ ಸಂಪತ್ ಕುಮಾರ್, ಕಾರ್ಕಳ ನಗರ ಪೊಲೀಸ್ ಠಾಣಾ ಕಾನೂನು ಸುವ್ಯವಸ್ಥೆಯ ಪಿಎಸ್ಐ ಮಧು ಬಿ ಇ ಮತ್ತು ಕಾರ್ಕಳ ರೋಟರಿ ಕ್ಲಬ್ ನ ಅಧ್ಯಕ್ಷ ಸುರೇಶ್ ನಾಯಕ್, ಕಾರ್ಯದರ್ಶಿ ಇಕ್ಬಾಲ್ ಅಹಮದ್ ಹಾಗು ಕಾಲೇಜಿನ ಪ್ರಿನ್ಸಿಪಾಲರಾದ ಶ್ರಿವರ್ಮ ಅಜ್ರಿ ಹಾಗೂ ಪ್ರಾದ್ಯಾಪಕ ವೃಂದದವರು ಮತ್ತು ಕಾಲೇಜಿನ ವಿಧ್ಯಾರ್ಥಿಗಳು ಹಾಜರಿದ್ದರು.