Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಹಿಂದುತ್ವ ರಾಜಕಾರಣ, ಭಾರತದ ಏಕಪಕ್ಷೀಯ...

ಹಿಂದುತ್ವ ರಾಜಕಾರಣ, ಭಾರತದ ಏಕಪಕ್ಷೀಯ ಕ್ರಮಗಳಿಂದ ದ್ವಿಪಕ್ಷೀಯ ಸಂಬಂಧಕ್ಕೆ ಅಡ್ಡಿ: ಪಾಕಿಸ್ತಾನ

ವಾರ್ತಾಭಾರತಿವಾರ್ತಾಭಾರತಿ15 Jan 2022 10:32 PM IST
share
ಹಿಂದುತ್ವ ರಾಜಕಾರಣ, ಭಾರತದ ಏಕಪಕ್ಷೀಯ ಕ್ರಮಗಳಿಂದ ದ್ವಿಪಕ್ಷೀಯ ಸಂಬಂಧಕ್ಕೆ ಅಡ್ಡಿ: ಪಾಕಿಸ್ತಾನ

ಇಸ್ಲಾಮಾಬಾದ್, ಜ.15: ಭಾರತದ ಹಿಂದುತ್ವ ರಾಜಕಾರಣ ಮತ್ತು ಇತ್ಯರ್ಥವಾಗದ ವಿಷಯಗಳ ಬಗ್ಗೆ ಏಕಪಕ್ಷೀಯ ಕ್ರಮಗಳು ದ್ವಿಪಕ್ಷೀಯ ಸಂಬಂಧಕ್ಕೆ ಅಡ್ಡಿಯಾಗಿವೆ ಎಂದು ಪಾಕಿಸ್ತಾನವು ತನ್ನ ಪ್ರಪ್ರಥಮ ರಾಷ್ಟ್ರೀಯ ಭದ್ರತಾ ಕಾರ್ಯನೀತಿಯಲ್ಲಿ ಉಲ್ಲೇಖಿಸಿದೆ.

‘ಬದಲಾಗುತ್ತಿರುವ ವಿಶ್ವದಲ್ಲಿ ವಿದೇಶಿ ನೀತಿ’  ಎಂಬ ಶೀರ್ಷಿಕೆಯ ರಾಷ್ಟ್ರೀಯ ಭದ್ರತಾ ಕಾರ್ಯನೀತಿಯ ದಾಖಲೆಯನ್ನು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಶುಕ್ರವಾರ ಬಿಡುಗಡೆಗೊಳಿಸಿದ್ದರು. ಈ ದಾಖಲೆಯಲ್ಲಿ ಭಾರತದ ಹೆಸರು ಕನಿಷ್ಟ 16 ಬಾರಿ ಮತ್ತು ಕಾಶ್ಮೀರದ ಹೆಸರು 113 ಬಾರಿ ಉಲ್ಲೇಖಿಸಲ್ಪಟ್ಟಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇತ್ಯರ್ಥಕ್ಕೆ ಬಾಕಿ ಇರುವ ವಿಷಯಗಳಿಗೆ ಸಂಬಂಧಿಸಿ ಏಕಪಕ್ಷೀಯ ನೀತಿ ಕ್ರಮಗಳನ್ನು ಅನುಸರಿಸುವುದು ಪ್ರಾದೇಶಿಕ ಸ್ಥಿರತೆಯ ಮೇಲೆ ನಕಾರಾತ್ಮಕ ಪರಿಣಾಮಕ್ಕೆ ಕಾರಣವಾಗುತ್ತದೆ. 

ಜಮ್ಮು-ಕಾಶ್ಮೀರ ವಿವಾದಕ್ಕೆ ನ್ಯಾಯಸಮ್ಮತ ಮತ್ತು ಶಾಂತಿಯುತ ಪರಿಹಾರ ಭಾರತ-ಪಾಕಿಸ್ತಾನದ ದ್ವಿಪಕ್ಷೀಯ ಸಂಬಂಧದ ಸಾರವಾಗಿದೆ. ವಿಶ್ವಸಂಸ್ಥೆಯ ಭದ್ರತಾ ಸಮಿತಿಯ ನಿರ್ಣಯದಂತೆ ಅಂತರಾಷ್ಟ್ರೀಯ ಸಮುದಾಯ ಖಾತರಿಪಡಿಸಿದ ಸ್ವಯಂ ನಿರ್ಣಯದ ಹಕ್ಕನ್ನು ಕಾಶ್ಮೀರದ ಜನತೆಗೆ ಖಾತರಿಪಡಿಸುವವರೆಗೆ ಪಾಕಿಸ್ತಾನವು ಅವರಿಗೆ ನೈತಿಕ, ರಾಜತಾಂತ್ರಿಕ, ರಾಜಕೀಯ ಮತ್ತು ಕಾನೂನು ನೆರವು ಒದಗಿಸಲಿದೆ ಎಂದು ದಾಖಲೆಯಲ್ಲಿ ಹೇಳಲಾಗಿದೆ. 

ದೇಶದಲ್ಲಿ ಭಯೋತ್ಪಾದನೆಗೆ ಬೆಂಬಲ ನೀಡುವ ಸಂಘಟನೆಗಳನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಆದರೂ, ಭಯೋತ್ಪಾದನೆಯ ಉದ್ಯೋಗವು ಕೆಲವರಿಗೆ ಆದ್ಯತೆಯ ನೀತಿಯಾಗಿದೆ ಎಂದು ಕಾರ್ಯನೀತಿಯಲ್ಲಿ ಗುರುತಿಸಲಾಗಿದೆ. ‘ದ್ವಿಪಕ್ಷೀಯ ಸಂಬಂಧಕ್ಕೆ ಸಂಬಂಧಿಸಿ ಜಮ್ಮು-ಕಾಶ್ಮೀರ ಪ್ರಮುಖ ವಿಷಯವಾಗಿದೆ. ಸರಿಯಾದುದನ್ನೇ ಮಾಡಿ ಮತ್ತು ನಮ್ಮ ಜನತೆಯ ಅಭಿವೃದ್ಧಿಗೆ ನೆರವಾಗಲು ಪ್ರಾದೇಶಿಕ ಸಂಪರ್ಕದ ಪ್ರಯೋಜನ ಪಡೆಯಿರಿ. ನೀವು ಸರಿಯಾದ ಕೆಲಸವನ್ನು ಮಾಡಲು ಬಯಸದಿದ್ದರೆ ಅದರಿಂದ ಇಡೀ ವಲಯಕ್ಕೆ ನಷ್ಟವಾಗುತ್ತದೆ’ ಎಂಬ ಸಂದೇಶವನ್ನು ಭಾರತಕ್ಕೆ ಈ ಕಾರ್ಯನೀತಿ ನೀಡುತ್ತದೆ’  ಎಂಬ ರಾಷ್ಟ್ರೀಯ ಭದ್ರತಾ ಸಲಹೆಗಾರ ಮೊಯೀದ್ ಯೂಸುಫ್ ಅವರ ಹೇಳಿಕೆಯನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X