ಬೆಂಗಳೂರು: ಕ್ರಿಕೆಟ್ ಫಿಕ್ಸಿಂಗ್ನಲ್ಲಿ ಭಾಗಿಯಾಗುವಂತೆ ಆಟಗಾರರಿಗೆ ಆಮಿಷವೊಡ್ಡಿದ ಆರೋಪ; ಎಫ್ಐಆರ್ ದಾಖಲು
ಸಾಂದರ್ಭಿಕ ಚಿತ್ರ
ಬೆಂಗಳೂರು, ಜ. 16: ಕ್ರಿಕೆಟ್ ಸ್ಪಾಟ್ ಫಿಕ್ಸಿಂಗ್ನಲ್ಲಿ ಭಾಗಿಯಾಗುವಂತೆ ದೇಶಿ ಆಟಗಾರನಿಗೆ ಆಮಿಷವೊಡ್ಡಿದ ಆರೋಪದ ಮೇಲೆ ಇಲ್ಲಿನ ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಲೊಕೇಶ್ ಎಂಬುವರು ನೀಡಿದ ದೂರಿನ ಮೇರೆಗೆ ಆರೋಪಿ ಬನ್ನಿ ಆನಂದ್ ಎಂಬಾತನ ವಿರುದ್ಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಮಿಳುನಾಡಿನ ಕ್ರಿಕೆಟ್ ಆಲ್ರೌಂಡರ್ ಸತೀಶ್ ರಾಜಗೋಪಾಲ್ ಎಂಬುವರಿಗೆ ಜ.3ರಂದು ಬನ್ನಿ ಆನಂದ್ ಎಂಬಾತ ಸಾಮಾಜಿಕ ಜಾಲತಾಣಗಳಲ್ಲಿ ಆಮಿಷವೊಡ್ಡಿದ್ದ ಎನ್ನುವ ಆರೋಪ ಕೇಳಿ ಬಂದಿದೆ.
ಮುಂಬರುವ ತಮಿಳುನಾಡು ಪ್ರಿಮಿಯರ್ ಲೀಗ್ನಲ್ಲಿ ಫಿಕ್ಸಿಂಗ್ನಲ್ಲಿ ಭಾಗಿಯಾಗಬೇಕು. ಈಗಾಗಲೇ ಇಬ್ಬರು ಆಟಗಾರರು ಫಿಕ್ಸಿಂಗ್ಗೆ ಒಪ್ಪಿದ್ದಾರೆ. ನೀವು ಭಾಗಿಯಾದರೆ ಪ್ರತಿ ಪಂದ್ಯಕ್ಕೆ 40 ಲಕ್ಷ ರೂ. ನೀಡುವುದಾಗಿ ಆಮಿಷವೊಡ್ಡಿದ್ದ ಎಂದು ತಿಳಿದುಬಂದಿದೆ.
Next Story