ಚಲನಚಿತ್ರಗಳಿಂದ ಪ್ರೇರಿತರಾಗಿ ವ್ಯಕ್ತಿಯೊಬ್ಬನನ್ನು ಹತ್ಯೆಗೈದ ಮೂವರು ಅಪ್ರಾಪ್ತರ ಬಂಧನ
ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯ ಜಹಾಂಗೀರ್ಪುರಿ ಪ್ರದೇಶದಲ್ಲಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ ಆರೋಪದ ಮೇಲೆ ಮೂವರು ಮಕ್ಕಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು NDTV ವರದಿ ಮಾಡಿದೆ.
ಪೊಲೀಸರು ನೀಡಿದ ಮಾಹಿತಿಯಂತೆ ಅಪ್ರಾಪ್ತರು ‘ಪುಷ್ಪ’, ‘ಭೌಕಾಲ’ದಂತಹ ದರೋಡೆಕೋರ ಸಿನಿಮಾಗಳಿಂದ ಪ್ರೇರಿತರಾಗಿ ಆ ಸಿನಿಮಾಗಳಿಂದ ಸ್ಫೂರ್ತಿ ಪಡೆದು ಕೊಲೆ ಮಾಡಿದ್ದಾರೆ. ಇಡೀ ಘಟನೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ಫೇಮಸ್ ಆಗುವ ಸಲುವಾಗಿ ಮೊಬೈಲ್ನಲ್ಲಿ ರೆಕಾರ್ಡ್ ಮಾಡಿದ್ದಾರೆ.
ಜಹಾಂಗೀರ್ಪುರಿಯ ಕೆ ಬ್ಲಾಕ್ಗೆ ತಲುಪಿದಾಗ, ಒಬ್ಬ ಅಪ್ರಾಪ್ತ ವೀಡಿಯೊವನ್ನು ಚಿತ್ರೀಕರಿಸಲು ಆರಂಭಿಸಿದ, ಇತರ ಇಬ್ಬರು ಮಕ್ಕಳು ಸಂತ್ರಸ್ತೆಯ ಹಾದಿಯನ್ನು ಅಡ್ಡಿಪಡಿಸಿದರು, ಮೂವರು ಥಳಿಸುತ್ತಿರುವ ದೃಶ್ಯವನ್ನು ಮೊಬೈಲ್ನಲ್ಲಿ ಚಿತ್ರೀಕರಿಸಲಾಗಿದೆ ಪೊಲೀಸರು ತಿಳಿಸಿದ್ದಾರೆ.
ಥಳಿತಕ್ಕೊಳಗಾದ ವ್ಯಕ್ತಿಯನ್ನು ಜಹಾಂಗೀರ್ಪುರಿಯ ಬಿಜೆಆರ್ ಎಂ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಆತ ಇರಿತದ ಗಾಯಗಳಿಂದ ಸಾವನ್ನಪ್ಪಿದ್ದಾನೆ.
ಸಿಸಿಟಿವಿ ದೃಶ್ಯಾವಳಿ ಮತ್ತು ಸ್ಥಳೀಯ ಗುಪ್ತಚರ ಆಧಾರದ ಮೇಲೆ, ಪೊಲೀಸರು ಬಂಧನವನ್ನು ತಪ್ಪಿಸಲು ನಿರಂತರವಾಗಿ ತಮ್ಮ ಸ್ಥಳವನ್ನು ಬದಲಾಯಿಸುತ್ತಿದ್ದ ಮಕ್ಕಳಿಗಾಗಿ ಹುಡುಕಲಾರಂಭಿಸಿದರು. ಆದರೆ, ಗುರುವಾರ ಅವರನ್ನು ಬಂಧಿಸಲಾಯಿತು.
ಘಟನೆಯನ್ನು ಚಿತ್ರೀಕರಿಸಿದ ಮೊಬೈಲ್ ಮತ್ತು ಕೊಲೆಗೆ ಬಳಸಿದ ಚಾಕುವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪೊಲೀಸರ ಕ್ಷಿಪ್ರ ಕ್ರಮದಿಂದಾಗಿ ಆ ತಪ್ಪಿತಸ್ಥ ಮಕ್ಕಳು ಸಾಮಾಜಿಕ ಮಾಧ್ಯಮಗಳಲ್ಲಿ ವೀಡಿಯೊಗಳನ್ನು ಅಪ್ಲೋಡ್ ಮಾಡುವುದನ್ನು ತಡೆಯಲಾಯಿತು.