ಚಲಿಸುತ್ತಿದ್ದ ಬಿಎಂಟಿಸಿ ಬಸ್ನಲ್ಲಿ ಕಾಣಿಸಿಕೊಂಡ ಬೆಂಕಿ: ತಪ್ಪಿದ ಭಾರೀ ಅನಾಹುತ
ಪೋಟೊ-twitter
ಬೆಂಗಳೂರು, ಜ.21: ನಗರದ ಚಾಮರಾಜಪೇಟೆಯ ಮಕ್ಕಳಕೂಟದ ಬಳಿ ಚಲಿಸುತ್ತಿದ್ದ ಬಿಎಂಟಿಸಿ ಬಸ್ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಯಾವುದೇ ಸಾವು-ನೋವು ಸಂಭವಿಸಿಲ್ಲ.
ಮೆಜೆಸ್ಟಿಕ್ನಿಂದ ಚಾಮರಾಜಪೇಟೆಯ ಮಕ್ಕಳ ಕೂಟ ಬಳಿ ಬರುವಾಗ ಬಿಎಂಟಿಸಿ ಬಸ್ನಲ್ಲಿ ಇದಕ್ಕಿಂದ್ದಂತೆ ಸಣ್ಣ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಬಿಎಂಟಿಸಿ ಚಾಲಕ ಬಸ್ನಲ್ಲಿದ್ದ 40 ಮಂದಿ ಪ್ರಯಾಣಿಕರನ್ನ ಕೆಳಗಿಳಿಸಿದ್ದಾರೆ. ನೋಡು ನೋಡುತ್ತಿದ್ದಂತೆ ಬಸ್ ಧಗಧಗನೆ ಹೊತ್ತಿ ಉರಿದಿದೆ.
ಇನ್ನು ಬೆಂಕಿಗೆ ಬಸ್ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ವಾಹನ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಸ್ನಲ್ಲಿದ್ದ ಫಸ್ಟ್ ಏಯ್ಡ್ ಬಾಕ್ಸ್, ಟಿಕೆಟ್ ಹಾಗೂ ದಿನದ ಪಾಸ್ಗಳು ಬೆಂಕಿಗೆ ಆಹುತಿಯಾಗಿವೆ. ಅದೃಷ್ಟವಶಾತ್ ಸಾವು-ನೋವು ಸಂಭವಿಸಿಲ್ಲ. ಘಟನಾಸ್ಥಳಕ್ಕೆ ವಿವಿಪುರಂ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.
Next Story